Tue,Aug04,2026
ಕನ್ನಡ / English

ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಬಹಿಷ್ಕಾರ ಪ್ರಕರಣ: 12 ಮಂದಿ ಬಂಧನ | JANATA NEWS

10 Mar 2023

ಚಾಮರಾಜನಗರ : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡು ದಂಪತಿಗೆ ಬಹಿಷ್ಕಾರ ಹಾಕಿದ್ದ ಘಟನೆಗೆ ಸಂಬಂದಿಸಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಈ ಹಿಂದೆ ನಾಲ್ವರನ್ನು ಬಂಧಿಸಿದ್ದರು ಮತ್ತು ಎಂಟು ಆರೋಪಿಗಳು ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದಾರೆ.

ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿಯಲ್ಲಿ ಪ್ರೇಮಿಗಳಿಬ್ಬರು ಅಂತರ್ ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿ ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ಕೊಳ್ಳೇಗಾಲ ಡಿ.ವೈ.ಎಸ್.ಪಿ ಕಚೇರಿಗೆ ಗೋವಿಂದರಾಜು ಹಾಗೂ ಶ್ವೇತಾ ದೂರು ಕೊಟ್ಟು ಅಳಲು ತೋಡಿಕೊಂಡಿದ್ದರು.

ಗೋವಿಂದರಾಜು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೂವಿನ ಕೊಪ್ಪಲು ಗ್ರಾಮದ ದಲಿತ ಜನಾಂಗಕ್ಕೆ ಸೇರಿದ ಪ್ರಕಾಶ್ ಎಂಬುವರ ಮಗಳಾದ ಶ್ವೇತಾ ಜೊತೆ ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ 5 ವರ್ಷಗಳ ಹಿಂದೆ ಮಳವಳ್ಳಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು.

ಗೋವಿಂದರಾಜು ಮಳವಳ್ಳಿಯಲ್ಲಿ ಮನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಆಗಾಗ ಗೋವಿಂದರಾಜು ಹಾಗೂ ಶ್ವೇತ ಕುಣಗಳ್ಳಿ ಗ್ರಾಮಕ್ಕೆ ಬಂದು ಹೋಗುತ್ತಿದ್ದು ಐದು ವರ್ಷದಿಂದ ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಗೋವಿಂದರಾಜು ಅವರ ಮನೆಯಲ್ಲಿ ಅಂತರ್ ಜಾತಿ ವಿವಾಹ ತಿಳಿದಿದ್ದರೂ ಸಹ ಮನೆಯವರು ಯಾರು ಸಹ ತೊಂದರೆ ನೀಡಲಿಲ್ಲ. ತಿಂಗಳಿಗೆ 2 ರಿಂದ 3 ಬಾರಿ ಗ್ರಾಮಕ್ಕೆ ಬಂದು ಹೋಗುತ್ತಿದ್ದರು.

ಆದರೆ ಗೋವಿಂದರಾಜು ಅವರ ಅಕ್ಕಪಕ್ಕದ ನಿವಾಸಿಗಳು ಅಂತರ್ ಜಾತಿ ವಿವಾಹದ ಬಗ್ಗೆ ಮಾಹಿತಿಯನ್ನು ಪಡೆದು ಶ್ವೇತಾ ನಮ್ಮ ಜಾತಿಯವಳಲ್ಲ, ಅವಳು ದಲಿತ ಜನಾಂಗಕ್ಕೆ ಸೇರಿದವಳು ಎಂದು ಪಕ್ಕದ ಮನೆಯವರಾದ ಜಯಲಕ್ಷ್ಮಿ, ಮಧು, ರಂಗಸ್ವಾಮಿ, ಕುಳ್ಳ, ಮಹದೇವಪ್ಪ ಮಹದೇವ ಶೆಟ್ಟಿ ಇವರುಗಳು ಗ್ರಾಮದ ಯಜಮಾನರುಗಳಿಗೆ ಮಾಹಿತಿ ನೀಡಿ ಎರಡರಿಂದ ಮೂರು ಬಾರಿ ಪಂಚಾಯಿತಿ ನಡೆಸಿ ದಂಡ ಕಟ್ಟಬೇಕು ಎಂದು ಸೂಚಿಸಿದ್ದರು.

ದಂಪತಿ ಡಿವೈಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ಆದರೆ, ದೂರಿನ ವಿಷಯ ತಿಳಿದ ಹಿರಿಯರು ದಂಡದ ಮೊತ್ತವನ್ನು 6 ಲಕ್ಷಕ್ಕೆ ಹೆಚ್ಚಿಸಿ ಗ್ರಾಮದಲ್ಲಿ ಗೋವಿಂದರಾಜು ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಗ್ರಾಮಸ್ಥರು ಕುಟುಂಬವನ್ನು ಗ್ರಾಮದಿಂದ ಹೊರಗೆ ಕಳುಹಿಸಿ, ಗ್ರಾಮದಿಂದ ಪಡಿತರ, ತರಕಾರಿ, ಹಾಲು ಖರೀದಿಸಬಾರದು ಮತ್ತು ನೀರು ತೆಗೆದುಕೊಳ್ಳಬಾರದು ಎಂದು ಆದೇಶಿಸಿದ್ದಾರೆ ಮತ್ತು ಅವರ ಈ ಆದೇಶವನ್ನು ಉಲ್ಲಂಘಿಸಿದರೆ ದಂಪತಿಯನ್ನು ಜೀವಂತ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಸಂಬಂಧ ಕೊಳ್ಳೇಗಾಲ ಡಿವೈಎಸ್ಪಿ ದೂರು ಪಡೆದು ಮಾಂಬಳ್ಳಿ ಪೊಲೀಸರಿಗೆ ಎಸ್ಸಿಎಸ್ಟಿ ದೌರ್ಜನ್ಯದಡಿ ಪ್ರಕರಣ ದಾಖಲಿಸುವಂತೆ ಸೂಚಿಸಿ ತನಿಖೆ ಕೈಗೊಂಡಿದ್ದರು. ಅದರಂತೆ, ಈಗ 12 ಮಂದಿ ಬಂಧನವಾಗಿದೆ.

RELATED TOPICS:
English summary :Excommunication case for inter-caste marriage: 12 arrested

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...