Sat,Mar21,2026
ಕನ್ನಡ / English

ಟಿಪ್ಪುವನ್ನು ಕೊಂದ ಉರಿಗೌಡ, ನಂಜೇಗೌಡರ ಶಾಶ್ವತ ದ್ವಾರ ನಿರ್ಮಿಸುತ್ತೇವೆ: ಸಿ ಟಿ ರವಿ ಹೇಳಿಕೆ | JANATA NEWS

13 Mar 2023

ವಿಜಯಪುರ : ಉರಿಗೌಡ, ನಂಜೇಗೌಡರ ದ್ವಾರವನ್ನು ಏಕೆ ತೆರವುಗೊಳಿಸಿದ್ದಾರೋ ಗೊತ್ತಿಲ್ಲ. ಆದರೆ, ಅವರಿಬ್ಬರ ಶಾಶ್ವತ ದ್ವಾರ ನಿರ್ಮಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು.

ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು.

RELATED TOPICS:
English summary :Urigowda, Nanjegowda who killed Tipu will build permanent gate: CT Ravi statement

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...