Wed,May06,2026
ಕನ್ನಡ / English

ಟಿಪ್ಪುವನ್ನು ಕೊಂದ ಉರಿಗೌಡ, ನಂಜೇಗೌಡರ ಶಾಶ್ವತ ದ್ವಾರ ನಿರ್ಮಿಸುತ್ತೇವೆ: ಸಿ ಟಿ ರವಿ ಹೇಳಿಕೆ | JANATA NEWS

13 Mar 2023

ವಿಜಯಪುರ : ಉರಿಗೌಡ, ನಂಜೇಗೌಡರ ದ್ವಾರವನ್ನು ಏಕೆ ತೆರವುಗೊಳಿಸಿದ್ದಾರೋ ಗೊತ್ತಿಲ್ಲ. ಆದರೆ, ಅವರಿಬ್ಬರ ಶಾಶ್ವತ ದ್ವಾರ ನಿರ್ಮಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು.

ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು.

RELATED TOPICS:
English summary :Urigowda, Nanjegowda who killed Tipu will build permanent gate: CT Ravi statement

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...