Wed,Aug05,2026
ಕನ್ನಡ / English

ಟಿಪ್ಪುವನ್ನು ಕೊಂದ ಉರಿಗೌಡ, ನಂಜೇಗೌಡರ ಶಾಶ್ವತ ದ್ವಾರ ನಿರ್ಮಿಸುತ್ತೇವೆ: ಸಿ ಟಿ ರವಿ ಹೇಳಿಕೆ | JANATA NEWS

13 Mar 2023

ವಿಜಯಪುರ : ಉರಿಗೌಡ, ನಂಜೇಗೌಡರ ದ್ವಾರವನ್ನು ಏಕೆ ತೆರವುಗೊಳಿಸಿದ್ದಾರೋ ಗೊತ್ತಿಲ್ಲ. ಆದರೆ, ಅವರಿಬ್ಬರ ಶಾಶ್ವತ ದ್ವಾರ ನಿರ್ಮಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು.

ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು.

RELATED TOPICS:
English summary :Urigowda, Nanjegowda who killed Tipu will build permanent gate: CT Ravi statement

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...