Sat,Mar21,2026
ಕನ್ನಡ / English

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ರದ್ದು: ಇದುವರೆಗೆ ಕಾಂಗ್ರೆಸ್​​ ನಾಯಕರು ಯಾಕೆ ಕೋರ್ಟ್ ಮೊರೆ ಹೋಗಿಲ್ಲ? | JANATA NEWS

25 Mar 2023

ದಾವಣಗೆರೆ : ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ರದ್ದುಗೊಳಿಸಿದ ಬಗ್ಗೆ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲರಾಗಿದ್ದು, ರಾಹುಲ್ ಗಾಂಧಿಯವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಕೋರ್ಟ್ ತೀರ್ಪು ಅವರ ಪರ ಬಂದರೆ ನ್ಯಾಯಾಂಗದ ಜಯ ಎನ್ನುತ್ತಾರೆ. ಅದೇ ವಿರುದ್ಧ ಬಂದರೆ ಬೀದಿಗಿಳಿದು ಹೋರಾಟ ಮಾಡುತ್ತಾರೆ. ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ತೀರ್ಪು ಬದಲಾಗುತ್ತಾ? ನಿಮ್ಮಲ್ಲಿ ಘಟಾನುಘಟಿ ವಕೀಲರು ಇದ್ದಾರೆ. ನಿಮಗೆ ತೀರ್ಪು ಸರಿಯಾಗಿಲ್ಲ ಅಂದರೆ ಹೈಯರ್ ಕೋರ್ಟ್ ಇದೆ. ಅಲ್ಲಿಗೆ ಹೋಗಿ ಎಂದು ರಾಹುಲ್ ಗಾಂಧಿ ಪ್ರಕರಣದಲ್ಲಿ ಕಾಂಗ್ರೆಸ್ ಅನುಸರಿಸುತ್ತಿರುವ ನಡೆ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಎರಡು ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆಗೆ ಒಳಗಾದರೆ ಸದಸ್ಯತ್ವ ರದ್ದಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಕಾಂಗ್ರೆಸ್​​ ನಾಯಕರು ಯಾಕೆ ಕೋರ್ಟ್ ಮೊರೆ ಹೋಗಿಲ್ಲ ಎಂದು ಪ್ರಶ್ನಿಸಿದರು.

ಅವರಲ್ಲಿ ಸಮರ್ಥ ವಕೀಲರಿದ್ದಾರೆ. ಆದರೆ ಅವರು ಕೋರ್ಟ್​ಗೆ ಹೋಗದೆ ಜನರ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಬೀದಿಯಲ್ಲಿ ನಿಂತು ಡ್ರಾಮಾ ಮಾಡುತ್ತಿದ್ದಾರೆ. ಸದಸ್ಯತ್ವ ಕಳೆದುಕೊಂಡವರಲ್ಲಿ ರಾಹುಲ್ ಗಾಂಧಿ ಮೊದಲಿಗರಲ್ಲ. ಈವರೆಗೆ 10 ಮಂದಿ ಜನಪ್ರತಿನಿಧಿಗಳು ಸ್ಥಾನ ಕಳೆದುಕೊಂಡಿದ್ದಾರೆ. ಅಂದು ರಾಹುಲ್ ಗಾಂಧಿ ಯಾಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು.

2013ರಲ್ಲಿ ಸುಗ್ರಿವಾಜ್ಞೆ ಪ್ರತಿಯನ್ನು ರಾಹುಲ್ ಗಾಂಧಿ ಸಂಸತ್​ನಲ್ಲಿ ಹರಿದುಹಾಕಿದ್ದರು. ಈ ಮೂಲಕ ಅನರ್ಹತೆಯ ಮಸೂದೆಗೆ ನನ್ನ ವಿರೋಧವಿದೆ ಎಂದು ಹೇಳಿ ಹಿರೋಯಿಸಂ ತೋರಿಸಿದ್ದರು. ಅಂದು ಹಾಗೆ ಮಾಡದಿದ್ದರೆ ಇಂದು ಅವರು ಅನರ್ಹತೆಯಿಂದ ಬಚಾವ್ ಆಗುತ್ತಿದ್ದರೇನೋ. ಅವರ ನಿಲುವೇ ಈಗ ಅವರಿಗೆ ಈ ಪರಿಸ್ಥಿತಿ ತಂದಿಟ್ಟಿದೆ. ಅಷ್ಟಕ್ಕೂ ಬಿಜೆಪಿ ಅವರನ್ನು ಟಾರ್ಗೆಟ್ ಮಾಡುತ್ತಿದೆ ಎಂಬುದರಲ್ಲಿ ಅರ್ಥವಿಲ್ಲ. ಇದು ಕಾಂಗ್ರೆಸ್​ನ ವ್ಯವಸ್ಥಿತ ಷಡ್ಯಂತ್ರ ಎನಿಸುತ್ತದೆ. ಅಲ್ಲದೆ ಸೋನಿಯಾಗಾಂಧಿ ಕುಟುಂಬ ಸಂವಿಧಾನ ಮತ್ತು ನ್ಯಾಯಾಲಯಕ್ಕಿಂತ ದೊಡ್ಡದು ಎಂದು ಭಾವಿಸಿದಂತಿದೆ ಎಂದರು.

RELATED TOPICS:
English summary :Rahul Gandhi Lok Sabha Membership Cancelled: Why Congress Leaders Have not Moved Court So Far?

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...