Wed,May06,2026
ಕನ್ನಡ / English

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ರದ್ದು: ಇದುವರೆಗೆ ಕಾಂಗ್ರೆಸ್​​ ನಾಯಕರು ಯಾಕೆ ಕೋರ್ಟ್ ಮೊರೆ ಹೋಗಿಲ್ಲ? | JANATA NEWS

25 Mar 2023

ದಾವಣಗೆರೆ : ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ರದ್ದುಗೊಳಿಸಿದ ಬಗ್ಗೆ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲರಾಗಿದ್ದು, ರಾಹುಲ್ ಗಾಂಧಿಯವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಕೋರ್ಟ್ ತೀರ್ಪು ಅವರ ಪರ ಬಂದರೆ ನ್ಯಾಯಾಂಗದ ಜಯ ಎನ್ನುತ್ತಾರೆ. ಅದೇ ವಿರುದ್ಧ ಬಂದರೆ ಬೀದಿಗಿಳಿದು ಹೋರಾಟ ಮಾಡುತ್ತಾರೆ. ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ತೀರ್ಪು ಬದಲಾಗುತ್ತಾ? ನಿಮ್ಮಲ್ಲಿ ಘಟಾನುಘಟಿ ವಕೀಲರು ಇದ್ದಾರೆ. ನಿಮಗೆ ತೀರ್ಪು ಸರಿಯಾಗಿಲ್ಲ ಅಂದರೆ ಹೈಯರ್ ಕೋರ್ಟ್ ಇದೆ. ಅಲ್ಲಿಗೆ ಹೋಗಿ ಎಂದು ರಾಹುಲ್ ಗಾಂಧಿ ಪ್ರಕರಣದಲ್ಲಿ ಕಾಂಗ್ರೆಸ್ ಅನುಸರಿಸುತ್ತಿರುವ ನಡೆ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಎರಡು ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆಗೆ ಒಳಗಾದರೆ ಸದಸ್ಯತ್ವ ರದ್ದಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಕಾಂಗ್ರೆಸ್​​ ನಾಯಕರು ಯಾಕೆ ಕೋರ್ಟ್ ಮೊರೆ ಹೋಗಿಲ್ಲ ಎಂದು ಪ್ರಶ್ನಿಸಿದರು.

ಅವರಲ್ಲಿ ಸಮರ್ಥ ವಕೀಲರಿದ್ದಾರೆ. ಆದರೆ ಅವರು ಕೋರ್ಟ್​ಗೆ ಹೋಗದೆ ಜನರ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಬೀದಿಯಲ್ಲಿ ನಿಂತು ಡ್ರಾಮಾ ಮಾಡುತ್ತಿದ್ದಾರೆ. ಸದಸ್ಯತ್ವ ಕಳೆದುಕೊಂಡವರಲ್ಲಿ ರಾಹುಲ್ ಗಾಂಧಿ ಮೊದಲಿಗರಲ್ಲ. ಈವರೆಗೆ 10 ಮಂದಿ ಜನಪ್ರತಿನಿಧಿಗಳು ಸ್ಥಾನ ಕಳೆದುಕೊಂಡಿದ್ದಾರೆ. ಅಂದು ರಾಹುಲ್ ಗಾಂಧಿ ಯಾಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು.

2013ರಲ್ಲಿ ಸುಗ್ರಿವಾಜ್ಞೆ ಪ್ರತಿಯನ್ನು ರಾಹುಲ್ ಗಾಂಧಿ ಸಂಸತ್​ನಲ್ಲಿ ಹರಿದುಹಾಕಿದ್ದರು. ಈ ಮೂಲಕ ಅನರ್ಹತೆಯ ಮಸೂದೆಗೆ ನನ್ನ ವಿರೋಧವಿದೆ ಎಂದು ಹೇಳಿ ಹಿರೋಯಿಸಂ ತೋರಿಸಿದ್ದರು. ಅಂದು ಹಾಗೆ ಮಾಡದಿದ್ದರೆ ಇಂದು ಅವರು ಅನರ್ಹತೆಯಿಂದ ಬಚಾವ್ ಆಗುತ್ತಿದ್ದರೇನೋ. ಅವರ ನಿಲುವೇ ಈಗ ಅವರಿಗೆ ಈ ಪರಿಸ್ಥಿತಿ ತಂದಿಟ್ಟಿದೆ. ಅಷ್ಟಕ್ಕೂ ಬಿಜೆಪಿ ಅವರನ್ನು ಟಾರ್ಗೆಟ್ ಮಾಡುತ್ತಿದೆ ಎಂಬುದರಲ್ಲಿ ಅರ್ಥವಿಲ್ಲ. ಇದು ಕಾಂಗ್ರೆಸ್​ನ ವ್ಯವಸ್ಥಿತ ಷಡ್ಯಂತ್ರ ಎನಿಸುತ್ತದೆ. ಅಲ್ಲದೆ ಸೋನಿಯಾಗಾಂಧಿ ಕುಟುಂಬ ಸಂವಿಧಾನ ಮತ್ತು ನ್ಯಾಯಾಲಯಕ್ಕಿಂತ ದೊಡ್ಡದು ಎಂದು ಭಾವಿಸಿದಂತಿದೆ ಎಂದರು.

RELATED TOPICS:
English summary :Rahul Gandhi Lok Sabha Membership Cancelled: Why Congress Leaders Have not Moved Court So Far?

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...