Tue,Aug04,2026
ಕನ್ನಡ / English

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ರದ್ದು: ಇದುವರೆಗೆ ಕಾಂಗ್ರೆಸ್​​ ನಾಯಕರು ಯಾಕೆ ಕೋರ್ಟ್ ಮೊರೆ ಹೋಗಿಲ್ಲ? | JANATA NEWS

25 Mar 2023

ದಾವಣಗೆರೆ : ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ರದ್ದುಗೊಳಿಸಿದ ಬಗ್ಗೆ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲರಾಗಿದ್ದು, ರಾಹುಲ್ ಗಾಂಧಿಯವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಕೋರ್ಟ್ ತೀರ್ಪು ಅವರ ಪರ ಬಂದರೆ ನ್ಯಾಯಾಂಗದ ಜಯ ಎನ್ನುತ್ತಾರೆ. ಅದೇ ವಿರುದ್ಧ ಬಂದರೆ ಬೀದಿಗಿಳಿದು ಹೋರಾಟ ಮಾಡುತ್ತಾರೆ. ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ತೀರ್ಪು ಬದಲಾಗುತ್ತಾ? ನಿಮ್ಮಲ್ಲಿ ಘಟಾನುಘಟಿ ವಕೀಲರು ಇದ್ದಾರೆ. ನಿಮಗೆ ತೀರ್ಪು ಸರಿಯಾಗಿಲ್ಲ ಅಂದರೆ ಹೈಯರ್ ಕೋರ್ಟ್ ಇದೆ. ಅಲ್ಲಿಗೆ ಹೋಗಿ ಎಂದು ರಾಹುಲ್ ಗಾಂಧಿ ಪ್ರಕರಣದಲ್ಲಿ ಕಾಂಗ್ರೆಸ್ ಅನುಸರಿಸುತ್ತಿರುವ ನಡೆ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಎರಡು ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆಗೆ ಒಳಗಾದರೆ ಸದಸ್ಯತ್ವ ರದ್ದಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಕಾಂಗ್ರೆಸ್​​ ನಾಯಕರು ಯಾಕೆ ಕೋರ್ಟ್ ಮೊರೆ ಹೋಗಿಲ್ಲ ಎಂದು ಪ್ರಶ್ನಿಸಿದರು.

ಅವರಲ್ಲಿ ಸಮರ್ಥ ವಕೀಲರಿದ್ದಾರೆ. ಆದರೆ ಅವರು ಕೋರ್ಟ್​ಗೆ ಹೋಗದೆ ಜನರ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಬೀದಿಯಲ್ಲಿ ನಿಂತು ಡ್ರಾಮಾ ಮಾಡುತ್ತಿದ್ದಾರೆ. ಸದಸ್ಯತ್ವ ಕಳೆದುಕೊಂಡವರಲ್ಲಿ ರಾಹುಲ್ ಗಾಂಧಿ ಮೊದಲಿಗರಲ್ಲ. ಈವರೆಗೆ 10 ಮಂದಿ ಜನಪ್ರತಿನಿಧಿಗಳು ಸ್ಥಾನ ಕಳೆದುಕೊಂಡಿದ್ದಾರೆ. ಅಂದು ರಾಹುಲ್ ಗಾಂಧಿ ಯಾಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು.

2013ರಲ್ಲಿ ಸುಗ್ರಿವಾಜ್ಞೆ ಪ್ರತಿಯನ್ನು ರಾಹುಲ್ ಗಾಂಧಿ ಸಂಸತ್​ನಲ್ಲಿ ಹರಿದುಹಾಕಿದ್ದರು. ಈ ಮೂಲಕ ಅನರ್ಹತೆಯ ಮಸೂದೆಗೆ ನನ್ನ ವಿರೋಧವಿದೆ ಎಂದು ಹೇಳಿ ಹಿರೋಯಿಸಂ ತೋರಿಸಿದ್ದರು. ಅಂದು ಹಾಗೆ ಮಾಡದಿದ್ದರೆ ಇಂದು ಅವರು ಅನರ್ಹತೆಯಿಂದ ಬಚಾವ್ ಆಗುತ್ತಿದ್ದರೇನೋ. ಅವರ ನಿಲುವೇ ಈಗ ಅವರಿಗೆ ಈ ಪರಿಸ್ಥಿತಿ ತಂದಿಟ್ಟಿದೆ. ಅಷ್ಟಕ್ಕೂ ಬಿಜೆಪಿ ಅವರನ್ನು ಟಾರ್ಗೆಟ್ ಮಾಡುತ್ತಿದೆ ಎಂಬುದರಲ್ಲಿ ಅರ್ಥವಿಲ್ಲ. ಇದು ಕಾಂಗ್ರೆಸ್​ನ ವ್ಯವಸ್ಥಿತ ಷಡ್ಯಂತ್ರ ಎನಿಸುತ್ತದೆ. ಅಲ್ಲದೆ ಸೋನಿಯಾಗಾಂಧಿ ಕುಟುಂಬ ಸಂವಿಧಾನ ಮತ್ತು ನ್ಯಾಯಾಲಯಕ್ಕಿಂತ ದೊಡ್ಡದು ಎಂದು ಭಾವಿಸಿದಂತಿದೆ ಎಂದರು.

RELATED TOPICS:
English summary :Rahul Gandhi Lok Sabha Membership Cancelled: Why Congress Leaders Have not Moved Court So Far?

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...