ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹೊತ್ತಿ ಉರಿದ ಶಾಲಾ ಬಸ್ | JANATA NEWS
ಬಳ್ಳಾರಿ : ಚಲಿಸುತ್ತಿದ್ದ ಶಾಲಾ ಮಕ್ಕಳ ಬಸ್ ಗೆ ಬೆಂಕಿ ತಗುಲಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆ ನಡುವೆ ನಡೆದಿದ್ದು, ಭಾರೀ ದುರಂತವೊಂದು ತಪ್ಪಿದೆ.
ಶಾಲೆಯ ಬಸ್ ನಲ್ಲಿ ಸುಮಾರು 30 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸಿರುಗುಪ್ಪ ಪಟ್ಟಣದ ವಿಶ್ವ ಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಬಸ್ ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ ಮಕ್ಕಳನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ತಿಳಿದು ಬಂದಿಲ್ಲ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.