Thu,May02,2024
ಕನ್ನಡ / English

ಓಡಾಡುವುದು ಹೆಲಿಕಾಪ್ಟರ್‌ನಲ್ಲಿ, ಆದರೆ ಸ್ವಂತ ಯಾವುದೇ ವಾಹನ ಖರೀದಿಸಿಲ್ಲ! | JANATA NEWS

17 Apr 2023
1698

ಬಳ್ಳಾರಿ : ಇಂದು ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಕೆಆರ್​ಪಿಪಿ ಅಭ್ಯರ್ಥಿಯಾಗಿ ಲಕ್ಷ್ಮೀ ಅರುಣಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬೃಹತ್ ಮೆರವಣಿಗೆ ಮಾಡಿ, ನಂತರ ಪಾಲಿಕೆ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಿದ್ದರೂ ಹೆಸರಿಗೆ ಯಾವುದೇ ವಾಹನ ಖರೀದಿಸಿಲ್ಲ. ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರಿಗಿಂತ ಪತ್ನಿ ಲಕ್ಷ್ಮೀ ಅರುಣಾ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಕಂಡು ಬಂದಿರುವ ಮಾಹಿತಿ.

ಮಾಜಿ ಸಚಿವ ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಯಿಂದ ಹೊರ ಬಂದು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ವನ್ನು ಸ್ಥಾಪಿಸಿದ್ದಾರೆ. ಜನಾರ್ದನ ರೆಡ್ಡಿ ಈಗಾಗಲೇ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಲಕ್ಮೀ ಅರುಣಾ ಅವರನ್ನು, ಬಿಜೆಪಿ ಅಭ್ಯರ್ಥಿ, ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಕಣಕ್ಕಿಳಿಸಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಅತ್ತೆ ಮತ್ತು ಮೈದುನ ನಡುವೆ ಪೈಪೋಟಿ ಏರ್ಪಟ್ಟಿದೆ.

ಪತಿ ಜನಾರ್ದನ ರೆಡ್ಡಿಗಿಂತ ಅವರ ಪತ್ನಿಯೇ ಶ್ರೀಮಂತೆಯಾಗಿದ್ದಾರೆ. ಲಕ್ಷ್ಮೀ ಅರುಣಾ ಅವರು 1.76 ಲಕ್ಷ ರೂ. ನಗದು ಹೊಂದಿದ್ದರೆ, ಅವರ ಪತಿ 1.33 ಲಕ್ಷ ರೂ. ಹೊಂದಿದ್ದಾರೆ.

ಲಕ್ಷ್ಮೀ ಅರುಣಾ ಅವರ ಚರಾಸ್ತಿ ಮೌಲ್ಯ 96.23 ಕೋಟಿ ರೂ. ಇದ್ದರೆ, ಜನಾರ್ದನ ರೆಡ್ಡಿ 29.20 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇನ್ನು ಮಗ ಕಿರೀಟಿ ರೆಡ್ಡಿ 7.24 ಕೋಟಿ ರೂ. ಚರಾಸ್ತಿ ಹೊಂದಿದ್ದಾರೆ. ಇನ್ನು ಲಕ್ಷ್ಮೀ ಅರುಣಾ 104.38 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತಿ ಜನಾರ್ದನ ರೆಡ್ಡಿ ಹೆಸರಿನಲ್ಲಿ 8 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಕಿರೀಟಿ ರೆಡ್ಡಿ 1.24 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್‌ನಲ್ಲಿರುವ ಮಾಹಿತಿ ಲಭ್ಯವಾಗಿದೆ.

RELATED TOPICS:
English summary :Flying in a helicopter, but never bought a car!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...