ಭೀಕರ ಅಪಘಾತ: ಮಗು ಸಹಿತ ನಾಲ್ವರು ಸ್ಥಳದಲ್ಲೇ ದುರ್ಮರಣ | JANATA NEWS
ಮಂಗಳೂರು : ಕಾರು ಹಾಗೂ ತೂಫಾನ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಟ್ಟಣ ಸಮೀಪದ ಬಿಳಿನೆಲೆ ಎಂಬಲ್ಲಿ ಸಂಭವಿಸಿದೆ.
ಕಾರಿನಲ್ಲಿದ್ದ ಮಗು, ಒಬ್ಬಳು ಮಹಿಳೆ, ಇಬ್ಬರು ಪುರುಷರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೇಳೂರಿನ ಈ ಕುಟುಂಬದವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು.
ಎದುರಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿಯಾಗಿದೆ. ತೂಫಾನ್ ವಾಹನ ಹಾಸನ ಮೂಲದ್ದು ಎನ್ನಲಾಗಿದೆ. ತೂಫಾನ್ನಲ್ಲಿ ಪ್ರಯಾಣಿಸುತ್ತಿದ್ದವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.
English summary :Terrible accident: Four people including a child died on the spot