Mon,May06,2024
ಕನ್ನಡ / English

ಈ ಬಾರಿ ಬಿಜೆಪಿ 150 ಸ್ಥಾನ ಪಡೆದು ಅಧಿಕಾರಕ್ಕೆ ಬಂದು ಆಡಳಿತ ನಡೆಸುವುದು ನಿಶ್ಚಿತ | JANATA NEWS

26 Apr 2023
2419

ಗದಗ : ಈ ಚುನಾವಣೆಯಲ್ಲಿ ಬಿಜೆಪಿ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.

ಗದಗದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮರ್ಗದರ್ಶನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ ಎಂದರು. ಸ್ವಜನ ಪಕ್ಷಪಾತ ಹಾಗೂ ಕಾಂಗ್ರೆಸ್ ಆಡಳಿತದಲ್ಲಿನ ಭ್ರಷ್ಟಾಚಾರ ನಿರ್ಮೂಲನೆಗಾಗಿ ಮತದಾರರು ಕಾಂಗ್ರೆಸ್ ನ್ನು ತಿರಸ್ಕರಿಸಿದ್ದಾರೆ. ಭಯೋತ್ಪಾದನೆಗೆ ಬೆಂಬಲಿಸಿರುವುದು, ನಿರಂತರವಾಗಿ ನಡೆದ ಗೋಹತ್ಯೆ, ರಾಜ್ಯದ 24 ಹಿಂದು ಕಾರ್ಯಕರ್ತರ ಹತ್ಯೆ ನಡೆಸಿರುವುದನ್ನು ಜನರು ನೋಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಗರೀಬಿ ಹಟಾವೊ ಹೆಸರಲ್ಲಿ ಕಾಂಗ್ರೆಸ್ ಮತಗಳನ್ನಷ್ಟೇ ಪಡೆದಿದೆ. ಆದರೆ ನರೇಂದ್ರ ಮೋದಿ ಸರ್ಕಾರದಲ್ಲಿ ಗರಿಬಿ ಹಟಾವೋ ಯೋಜನೆಗಳನ್ನ ತರಲಾಗಿದೆ. ಮನೆಗಳಿಗೆ ಗ್ಯಾಸ್, ಶೌಚಾಲಯ, ಜನರಿಕ್ ಔಷಧಿ ನೀಡಿದ್ದು ಜನರ ಮನಸ್ಸಿನಲ್ಲಿ ಉಳಿದಿದೆ ಎಂದು ಹೇಳಿದರು.

ಹಳೆ ಮೈಸೂರು ಭಾಗದಲ್ಲೂ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ರೋಡ್ ಶೋನಲ್ಲಿ ನಿರೀಕ್ಷೆಗೂ ಮೀರಿ ಜನಸಾಗರ ಸೇರುತ್ತಿದೆ ಎಂದ ನಳಿನ್ ಕುಮಾರ್ ಕಟೀಲ್, ಭಯೋತ್ಪಾದನೆಗೆ ಬೆಂಗಾವಲಾಗಿ ನಿಂತು ಕಾಂಗ್ರೆಸ್ ಪುಷ್ಟೀಕರಣ ರಾಜಕಾರಣ ಮಾಡುತ್ತದೆ ಎಂದರು.

ಕಾಂಗ್ರೆಸ್ ನ ಸೋಲು ಖಚಿತವಾಗಿದ್ದು, ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.

ಹಿಂದಿನಿಂದಲೂ ಗದಗ ಕ್ಷೇತ್ರದಲ್ಲಿ ಗೂಂಡಾಗಿರಿ ಪ್ರವೃತ್ತಿ ಮಿತಿಮೀರಿದೆ. ಕಳೆದ ಕೆಲ ದಿನಗಳ ಹಿಂದೆ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವುದು ಕಾಂಗ್ರೆಸ್ ನ ಗೂಂಡಾಗಿರಿ ಪ್ರವೃತ್ತಿ ತಿಳಿಯುತ್ತದೆ. ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ವಿಜಯ ದಾಖಲಿಸುತ್ತದೆ ಎಂದು ಹೇಳಿದರು.

RELATED TOPICS:
English summary :This time, BJP is sure to win 150 seats and come to power

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...