Tue,Aug04,2026
ಕನ್ನಡ / English

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ, ಹೂವುಗಳಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿದ್ರು! | JANATA NEWS

29 Apr 2023

ತುಮಕೂರು : ಜಿ. ಪರಮೇಶ್ವರ್​ ಮೇಲೆ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತಂತೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರು ಬೇಡ ಎಂದರು ಮೇಲಕ್ಕೆತ್ತಿದ್ದರು, ಜೆಸಿಬಿ ಮೂಲಕ ಹೂ ಹಾಕಲು ರೆಡಿಮಾಡಿಕೊಂಡಿದ್ದರು. ಕೂಡಲೇ ತಲೆಗೆ ಏನೋ ಬಡಿದಂತಾಯಿತು. ತಲೆಗೆ ಕಲ್ಲು ಬೀಳುತ್ತಿದ್ದಂತೆ ಜೋರಾಗಿ ಕೂಗಿದೆ. ಕೂಡಲೇ ನಮ್ಮ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು ಎಂದರು.

ಜಿ. ಪರಮೇಶ್ವರ್​ ಅವರು ಗೆಲ್ಲುವುದು ಖಚಿತ, ಹೀಗಾಗಿ ಕಲ್ಲು ಎಸೆತದಲ್ಲಿ ವಿರೋಧಿಗಳ ಕೈವಾಡ ಇದೆ ಎಂದು ಪರಮೇಶ್ವರ್​ ಆಪ್ತರು ಆರೋಪ ಮಾಡಿದ್ದಾರೆ. ಅವರಿಗೆ ಒಂದಲ್ಲ ಎರಡು ಬಾರಿ ಕಲ್ಲು ಎಸೆತವಾಗಿದೆ. ಮೊದಲ ಬಾರಿ ನಡೆದ ದಾಳಿಯಲ್ಲಿ ಅದೃಷ್ಟವಶಾತ್ ಪರಮೇಶ್ವರ್​ ಪಾರಾಗಿದ್ದರು. ಎರಡನೇ ಬಾರಿ ನಡೆದ ದಾಳಿಯಲ್ಲಿ‌ ಪರಮೇಶ್ವರ್​ಗೆ ಕಲ್ಲೇಟು ಬಿದ್ದಿದೆ ಆರೋಪಿಸಿದ್ದಾರೆ.

ಜಿ. ಪರಮೇಶ್ವರ್ ತಗುಲಿದ ಕಲ್ಲಿನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೂ ಚೆಲ್ಲಲು ತಂದಿದ್ದ ಜೆಸಿಬಿಯಲ್ಲೇ ಬಂತಾ ಕಲ್ಲು? ಇಲ್ಲ ವಿರೋಧಿಗಳು ಏನಾದ್ರು ಹೂ ಹಾಕುವುದನ್ನೇ ಕಾದು ಪರಂ ಕಡೆಗೆ ಕಲ್ಲು ಬಿಸಿದ್ರಾ? ಎಂಬ ಎರಡು ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿ. ಪರಮೇಶ್ವರ್ ಮಾತನಾಡಿ ಹೂವುಗಳಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿದ್ದರು ಎಂದನಿಸುತ್ತದೆ. ನನಗೆ ಶತ್ರುಗಳು ಕಡಿಮೆ ಇದೆ ಎಂದು ತಿಳಿದಿದ್ದೆ, ಈ ಬಗ್ಗೆ ತನಿಖೆ ಮಾಡಲು ಎಸ್ ಪಿ ಗೆ ಹೇಳಿದ್ದೇನೆ. 1999 ರಲ್ಲಿ ನನಗೆ ಚಾಕುವಿನಿಂದ ತಿವಿಯಲು ಮುಂದಾಗಿದ್ದರು. ಪದೇ ಪದೇ ಇಂತಹ ಘಟನೆ ಸಂಭವಿಸುತ್ತಿದೆ. ತಲೆಗೆ ಒಂದೂವರೆ ಇಂಚು ಗಾಯವಾಗಿದೆ, ವೈದ್ಯರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ನಿರ್ಧರಿಸುತ್ತೇನೆ. ನಾನು ಯಾವುದಕ್ಕೂ ಹೆದರಲ್ಲ ಎಂದರು.

RELATED TOPICS:
English summary :The case of stone pelting on Parameshwar, someone stoned the flowers!

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...