ಶಿಕಾರಿಪುರದಲ್ಲಿ ಬಿ.ವೈ ವಿಜಯೇಂದ್ರ ಗೆಲ್ಲದಂತೆ ವಾಮಾಚಾರ : ಬಿವೈ ರಾಘವೇಂದ್ರ ಆರೋಪ | JANATA NEWS
ಶಿವಮೊಗ್ಗ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಶಿಕಾರಿಪುರ ವಿಧಾನ ಸಭೆ ಚುನಾವಣೆಯಲ್ಲಿ ಚುನಾವಣೆ ಗೆಲ್ಲಲು ತೊಟಕಾಗುವಂತೆ ವಾಮಾಚಾರ ಮಾಡಲಾಗಿತ್ತು ಎಂದು ಹಾಗೂ ಈ ಕುರಿತು ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ.
ಶಿಕಾರಿಪುರ ತಾಲೂಕಿನ ಬಂಡಿಬೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ ಸರ್ವೆನಂಬರ್ 36 ರಲ್ಲಿರುವ ಯಡಿಯೂರಪ್ಪ ಅವರ ಅಡಿಕೆ ತೋಟದಲ್ಲಿ ಕಾಡುಪ್ರಾಣಿಯನ್ನು ಕೊಂದು ವಾಮಾಚಾರ ನಡೆಸಲಾಗಿದೆ ಎಂದು ತೋಟ ನೋಡಿಕೊಳ್ಳುವ ಎಸ್.ಕೆ ರಮೇಶ್ ದೂರು ದಾಖಲಿಸಿದ್ದಾರೆ.
ತೋಟದ ಕಾಂಪೌಂಡ್ ಬಳಿ ವಾಮಾಚಾರ ನಡೆಸಿರುವ ಕಿಡಿಗೇಡಿಗಳು ಕಾಡುಪ್ರಾಣಿ ಹತ್ಯೆಗೈದು ತೋಟದಲ್ಲಿ ಹೂತು ಹಾಕಿದ್ದಾರೆ. ಸ್ಥಳದಲ್ಲಿ ಅರಿಶಿಣ, ಕುಂಕುಮ ಹೂವು ಪತ್ತೆಯಾಗಿದೆ. ವಿಜಯೇಂದ್ರ ಅವರಿಗೆ ಕೇಡು ಬಯಸಿ ವಾಮಾಚಾರ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.