Thu,Aug06,2026
ಕನ್ನಡ / English

ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್​ ಆರೋಪದ ಬಗ್ಗೆ ತನಿಖೆ ನಡೆಸಿ: ಕಾಂಗ್ರೆಸ್​ಗೆ ಕುಮಾರಸ್ವಾಮಿ ಸವಾಲು | JANATA NEWS

12 Jun 2023

ರಾಮನಗರ : ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಬಗ್ಗೆ ಕಾಂಗ್ರೆಸ್​ ನಾಯಕರು ಸಾಬೀತು ಮಾಡಿದ್ದಾರಾ? ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದ್ರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ ಎಂದರು.

ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು, ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ಹೇಳಿದರು.

ಸಂಸದ ಡಿ.ಕೆ. ಸುರೇಶ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ ಅವರು, “ನನ್ನ ವಿಚಾರ ಬಿಡಿ, ರಾಮನಗರದ ಹಾಲಿ ಸಂಸದರ ವಿಚಾರವನ್ನೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂಥವರೇ ಚುನಾವಣೆ ಬೇಡ ಎಂದು ಹೇಳುತ್ತಿರುವಾಗ ನಮ್ಮದು ಯಾವ ಲೆಕ್ಕ ಎಂದು ಡಿ.ಕೆ. ಸುರೇಶ್ ಹೆಸರೇಳದೆ ವ್ಯಂಗ್ಯವಾಡಿದರು.

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ದರೇ? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಅವರು ಪ್ರಶ್ನಿಸಿದರು.

ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತೇವೆ ಅಂತಿದ್ದಾರೆ. ಆದರೆ ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಮೊದಲು ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೇವಿ ಅಂದರು. ಈಗ ಮಾಲೀಕರು ಬಾಡಿಗೆದಾರರು ಅಗ್ರಿಮೆಂಟ್ ಕೊಡ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡ್ದಾಗ ನನಗೂ ಫ್ರೀ, ನಿನಗೂ ಫ್ರೀ ಅಂದ್ರಿ.! ಈಗ ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ನೋಡಬೇಕು ಎಂದು ಹೇಳಿದರು.

RELATED TOPICS:
English summary :Investigate 40 percent allegation on BJP govt: Kumaraswamy challenges Congress

ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ನ್ಯೂಸ್ MORE NEWS...