Thu,Sep11,2025
ಕನ್ನಡ / English

ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಫ್ರೀ ಬಸ್ಸಲ್ಲಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಬಂದ ವಿವಾಹಿತೆ! | JANATA NEWS

14 Jun 2023

ಮಂಗಳೂರು : ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಗೊಂಡಿದ್ದು, ಮಹಿಳಾ ಪ್ರಯಾಣಿಕ ಓಡಾಟ ಹೆಚ್ಚಾಗಿದೆ.

ಈ ನಡುವೆ ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ‌ ಪ್ರಿಯತಮೆ ಬಂದಿರುವ ಘಟನೆ ನಡೆದಿದೆ. ತನ್ನ 11 ತಿಂಗಳ ಮಗವನ್ನು ಬಿಟ್ಟು ಹುಬ್ಬಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದಾಳೆ.

ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಯುವತಿಗೆ ಬೇರೆಯವನ ಜೊತೆ ಮದುವೆ ಆದ ಬಳಿಕವೂ ತನ್ನ ಪ್ರಿಯಕರನ‌ ಜೊತೆ ಒಡನಾಟದಲ್ಲಿದ್ದಳು. ಪುತ್ತೂರು ಕೋಡಿಂಬಾಡಿ ಸಮೀಪದಲ್ಲಿ ಪ್ರಿಯಕರ ತೋಟದ ಕೆಲಸ ಮಾಡುತ್ತಿದ್ದ.

ಯುವಕನೋರ್ವನನ್ನು ಪ್ರೀತಿಸುತ್ತಿರುವುದು ತಿಳಿದಿದ್ದ ಮನೆಯವರು ನೇರವಾಗಿ ತನ್ನ ಪ್ರಿಯಕರನ ಹತ್ತಿರ ಹೋಗಿರಬಹುದು ಎಂಬ ಶಂಕೆಯಿಂದ ಆಕೆಯ ಮನೆಯವರು ರಾತ್ರಿ ವೇಳೆ ಪುತ್ತೂರಿನ ಕೋಡಿಬಾಡಿಗೆ ಬಂದು ಹುಡುಕಾಡಿದ್ದಾರೆ.

ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಧೈರ್ಯ ಹೇಳಿದ್ದಾರೆ. ಮಹಿಳೆ ಮನೆಯವರಿಂದ ಗ್ರಾಮ ಪಂಚಾಯಿಸಿ ಸದಸ್ಯ ಮಾಹಿತಿ ಪಡೆದುಕೊಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಅವರ ಜೊತೆ ಹುಡುಕಾಟ ಆರಂಭಿಸಿದ್ದಾರೆ.

ತನ್ನ ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಹೇಳಿ ಈಕೆ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಆಧಾರ್ ಕಾರ್ಡ್ ಅನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತೋರಿಸಲು ತಂದಿದ್ದಳು. ಗಂಡನಲ್ಲಿ ಆಧಾರ್ ಲಿಂಕ್ ಬಗ್ಗೆ ಸುಳ್ಳು ಹೇಳಿ ಎಸ್ಕೇಪ್ ಆಗಿದ್ದಾಳೆ. ಇದೀಗ ಎರಡೂ ಮನೆಯವರಿಂದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಇದೀಗ ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

RELATED TOPICS:
English summary :A married woman left her 11-month-old baby for her lover and came to Mangalore from Hubli in a free bus!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...