ಗಾಳಿಗೆ ಉರುಳಿ ಬಿದ್ದ ಶಾಮಿಯಾನ, ಮಹಿಳೆ ಸಾವು, ನಾಲ್ವರಿಗೆ ಗಾಯ | JANATA NEWS
ಕೊಪ್ಪಳ : ಜೋರಾಗಿ ಗಾಳಿ ಬೀಸಿದ್ದರಿಂದ ಶಾಮಿಯಾನ ಹಾರಿಬಿದ್ದು ನಾಲ್ವರಿಗೆ ಗಾಯಗಳಾಗಿದ್ದು, ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಮುಷ್ಟೂರು ಕ್ಯಾಂಪ್ನಲ್ಲಿ ನಡೆದಿದೆ.
ಅಂಜಿನಮ್ಮ(45) ಮೃತ ದುರ್ದೈವಿ ಮಹಿಳೆಯಾಗಿದ್ದು, ಇವರು ಗಂಗಾವತಿ ತಾಲೂಕಿನ ಪ್ರಗತಿ ನಗರ ನಿವಾಸಿ. ಸದ್ಯ ನಾಲ್ವರು ಗಾಯಾಳುಗಳಿಗೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕಾಗಿ ಶಾಮಿಯಾನ ಹಾಕಲಾಗಿತ್ತು. ಅಡುಗೆ ಮಾಡುವ ಜಾಗದಲ್ಲಿ ಹಾಕಿದ್ದ ಶಾಮಿಯಾನ ಅಡುಗೆ ತಯಾರಿಸುತ್ತಿದ್ದ ಮಹಿಳೆಯರ ಮೇಲೆ ಬಿದ್ದು, ಅವಘಡ ಸಂಭವಿಸಿದೆ.
ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ
English summary :Umbrella fell in the wind, woman killed, four injured