Thu,Sep11,2025
ಕನ್ನಡ / English

ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್​ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ? | JANATA NEWS

21 Jun 2023

ಚಿಕ್ಕಮಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್​ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ನೀವು ಘೋಷಿಸಿರುವಂತೆ 10 ಕೆಜಿ ಅಕ್ಕಿ ಕೊಡಿ. ಅಂದರೆ ಒಬ್ಬರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ದಾಸ್ತಾನು ಇಟ್ಟುಕೊಂಡಿರುವುದು ತುರ್ತು ಸಂದರ್ಭಕ್ಕಅಗಿಯೇ ಹೊರತು ಕರ್ನಾಟಕಕ್ಕೆ ಕೊಡುವುದಕ್ಕೆ ಅಲ್ಲ. ಬರ, ಸಾಂಕ್ರಾಮಿಕ, ನೆರೆಯಂತಹ ಸಂದರ್ಭಗಳನ್ನು ನಿಭಾಯಿಸಲೆಂದು ಅಕ್ಕಿಯನ್ನು ದಾಸ್ತಾನು ಇಟ್ಟುಕೊಳ್ಳಲಾಗಿದೆ. ಬೇರೆ ರಾಜ್ಯಗಳಿಂದ ಅಥವಾ ರೈತರಿಂದ ಅಕ್ಕಿಯನ್ನು ಖರೀದಿಸಿ ಕಾಂಗ್ರೆಸ್​ನವರು ಜನತೆಗೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ಸಿಗರಿಗೆ ಮಾನ-ಮರ್ಯಾದೆ ಇಲ್ಲ. ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ. ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ. ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನು ಗೆಲ್ಲುವುದಕ್ಕೆ ಇಲ್ಲಸಲ್ಲದ ಭರವಸೆ, ಆಸೆ ತೋರಿಸಿದ್ದರು ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಾಗದೆ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೊಟ್ಟು ಮಾಡುತ್ತಿದ್ಧಾರೆ. ಗ್ಯಾರಂಟಿಗ ಹೆಸರಿನಲ್ಲಿ ಮತ ಪಡೆದಿರುವ ಸಿದ್ದರಾಮಯ್ಯನವರು ಅಧಿಕಾರ ನಡೆಸುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Did the Congress leaders not have brains while announcing the guarantees?

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...