ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ? | JANATA NEWS
ಚಿಕ್ಕಮಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ನೀವು ಘೋಷಿಸಿರುವಂತೆ 10 ಕೆಜಿ ಅಕ್ಕಿ ಕೊಡಿ. ಅಂದರೆ ಒಬ್ಬರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರ ಸರ್ಕಾರ ಅಕ್ಕಿ ದಾಸ್ತಾನು ಇಟ್ಟುಕೊಂಡಿರುವುದು ತುರ್ತು ಸಂದರ್ಭಕ್ಕಅಗಿಯೇ ಹೊರತು ಕರ್ನಾಟಕಕ್ಕೆ ಕೊಡುವುದಕ್ಕೆ ಅಲ್ಲ. ಬರ, ಸಾಂಕ್ರಾಮಿಕ, ನೆರೆಯಂತಹ ಸಂದರ್ಭಗಳನ್ನು ನಿಭಾಯಿಸಲೆಂದು ಅಕ್ಕಿಯನ್ನು ದಾಸ್ತಾನು ಇಟ್ಟುಕೊಳ್ಳಲಾಗಿದೆ. ಬೇರೆ ರಾಜ್ಯಗಳಿಂದ ಅಥವಾ ರೈತರಿಂದ ಅಕ್ಕಿಯನ್ನು ಖರೀದಿಸಿ ಕಾಂಗ್ರೆಸ್ನವರು ಜನತೆಗೆ ಕೊಡಲಿ ಎಂದು ಆಗ್ರಹಿಸಿದ್ದಾರೆ.
ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ಸಿಗರಿಗೆ ಮಾನ-ಮರ್ಯಾದೆ ಇಲ್ಲ. ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ. ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ. ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನು ಗೆಲ್ಲುವುದಕ್ಕೆ ಇಲ್ಲಸಲ್ಲದ ಭರವಸೆ, ಆಸೆ ತೋರಿಸಿದ್ದರು ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಾಗದೆ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೊಟ್ಟು ಮಾಡುತ್ತಿದ್ಧಾರೆ. ಗ್ಯಾರಂಟಿಗ ಹೆಸರಿನಲ್ಲಿ ಮತ ಪಡೆದಿರುವ ಸಿದ್ದರಾಮಯ್ಯನವರು ಅಧಿಕಾರ ನಡೆಸುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.