Wed,May06,2026
ಕನ್ನಡ / English

ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ | JANATA NEWS

22 Jun 2023

ದಾವಣಗೆರೆ : ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುವುದಾಗಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೇಂದ್ರದವರು ಅಕ್ಕಿ ಕೊಡುವುದಾಗಿ ಹೇಳಿರಲಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಜೊತೆಗೆ ರಾಜ್ಯ ಸರ್ಕಾರ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಬೇಕು ಎಂದು ಒತ್ತಾಯಿಸಿ ಬಜೆಟ್ ಅಧಿವೇಶನ ಪ್ರಾರಂಭದಿಂದ ಮುಗಿಯುವರೆಗೂ ವಿಧಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ತಾವೇ ಧರಣಿ, ಸತ್ಯಾಗ್ರಹ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕಾಂಗ್ರೆಸ್ ತನ್ನ ಸುಳ್ಳು ಭರವಸೆಯಿಂದ ಇಷ್ಟು ಸೀಟು ಗೆದ್ದಿದೆ ಎಂದು ತಿಳಿಸಿದರು. ಭರವಸೆ ಈಡೇರಿಸಲು ಯೋಗ್ಯತೆ ಇರದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರದಿದ್ದರೆ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತೇವೆ. ಇದರಲ್ಲಿ ಬಿಜೆಪಿ ರಾಜ್ಯ ನಾಯಕರು ಭಾಗವಹಿಸುತ್ತಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ನಂತರ ಪ್ರತಿಭಟನೆ ನಡೆಸಲಾಗುವುದು. ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ರಾಜ್ಯಾದ್ಯಂತ 7 ತಂಡಗಳ ಪ್ರವಾಸ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮುಗಿಸಿ ಇಂದು ದಾವಣಗೆರೆ ಜಿಲ್ಲೆಗೆ ಬಂದಿದ್ದೇನೆ. ಕಾಂಗ್ರೆಸ್ ಸರ್ಕಾರ ಮನೆ‌ ಮನೆಗೆ ಹೋಗಿ 5 ಗ್ಯಾರಂಟಿ ಪತ್ರ ಕೊಟ್ಟು ಬಂದಿದ್ದಾರೆ.

ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿ ಕೊಟ್ಟಿದ್ದು, ಮಹಿಳೆಯರಿಗೆ ಉಚಿತ ಬಸ್ ಎಂಬುದು ಜಾರಿಯಲ್ಲಿದೆ. ಅದಕ್ಕೂ ಕೆಲವು ಅಡ್ಡಿ ಆತಂಕಗಳಿವೆ. ಉಳಿದ 4 ಗ್ಯಾರಂಟಿಗಳನ್ನು ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಕಾರ್ಯರೂಪಕ್ಕೆ ತರದೆ ಇದ್ದರೆ ಸದನದ ಒಳಗೆ ಮತ್ತು ಹೊರಗಡೆ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇಂದು ರಾತ್ರಿ 12 ಗಂಟೆಗೆ ಅಮೆರಿಕ ಸಂಸತ್ ಉದ್ದೇಶಿಸಿ ನಮ್ಮ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅಂತವರು ಪ್ರಧಾನಿಯಾಗಿ ಸಿಕ್ಕಿರುವುದು ನಮ್ಮ ಸೌಭಾಗ್ಯ ಎಂದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಜಗತ್ತಿನ 5 ನೇ ಅತಿ ದೊಡ್ಡ ಆರ್ಥಿಕ ಶಕ್ತಿಯ ದೇಶ ವಾಗಿದೆ. ಎಂಟು ವರ್ಷಗಳಲ್ಲಿ 530 ಬಿಲಿಯನ್ ಡಾಲರ್ ಬಂಡವಾಳವನ್ನು ಭಾರತದಲ್ಲಿ ಹೂಡಿಕೆ ಮಾಡಲಾ ಗಿದೆ. ಸ್ಟಾರ್ಟಪ್‌ನಲ್ಲಿ ವಿಶ್ವದ ಮೂರನೇ ರಾಷ್ಟ್ಟವಾಗಿದೆ. 2023ರಲ್ಲಿ ಅಮೆರಿಕಾ, ಚೀನಾಕ್ಕಿಂತಲೂ ಹೆಚ್ಚಿನ ಜಿಡಿಪಿ ಹೊಂದಿದೆ. ಈಗ ಭಾರತದ ಜಿಡಿಪಿ ಶೇ.9.1 ರಷ್ಟಿದೆ. ವಿವಿಧ ಯೋಜನೆಗಳ ಮೂಲಕ ಜನರ ಖಾತೆಗೆ ನೇರ ಹಣ ವರ್ಗಾವಣೆ ಆಗಿದೆ. ಆದರೂ, ಕರ್ನಾಟಕದ ಕಾಂಗ್ರೆಸ್‌ನವರು ಬಾಯಿ ಬಡುಕರಂತೆ ಮೋದಿಯವರ ಬಗ್ಗೆ ಮನ ಬಂದಂತೆ ಮಾತನಾಡುತ್ತಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :All the promises should be fulfilled by June 5, if not fulfilled, protest near the Gandhi statue of Vidhansouda.

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...