Sat,Mar21,2026
ಕನ್ನಡ / English

ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ | JANATA NEWS

22 Jun 2023

ದಾವಣಗೆರೆ : ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುವುದಾಗಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೇಂದ್ರದವರು ಅಕ್ಕಿ ಕೊಡುವುದಾಗಿ ಹೇಳಿರಲಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಜೊತೆಗೆ ರಾಜ್ಯ ಸರ್ಕಾರ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಬೇಕು ಎಂದು ಒತ್ತಾಯಿಸಿ ಬಜೆಟ್ ಅಧಿವೇಶನ ಪ್ರಾರಂಭದಿಂದ ಮುಗಿಯುವರೆಗೂ ವಿಧಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ತಾವೇ ಧರಣಿ, ಸತ್ಯಾಗ್ರಹ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕಾಂಗ್ರೆಸ್ ತನ್ನ ಸುಳ್ಳು ಭರವಸೆಯಿಂದ ಇಷ್ಟು ಸೀಟು ಗೆದ್ದಿದೆ ಎಂದು ತಿಳಿಸಿದರು. ಭರವಸೆ ಈಡೇರಿಸಲು ಯೋಗ್ಯತೆ ಇರದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರದಿದ್ದರೆ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತೇವೆ. ಇದರಲ್ಲಿ ಬಿಜೆಪಿ ರಾಜ್ಯ ನಾಯಕರು ಭಾಗವಹಿಸುತ್ತಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ನಂತರ ಪ್ರತಿಭಟನೆ ನಡೆಸಲಾಗುವುದು. ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ರಾಜ್ಯಾದ್ಯಂತ 7 ತಂಡಗಳ ಪ್ರವಾಸ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮುಗಿಸಿ ಇಂದು ದಾವಣಗೆರೆ ಜಿಲ್ಲೆಗೆ ಬಂದಿದ್ದೇನೆ. ಕಾಂಗ್ರೆಸ್ ಸರ್ಕಾರ ಮನೆ‌ ಮನೆಗೆ ಹೋಗಿ 5 ಗ್ಯಾರಂಟಿ ಪತ್ರ ಕೊಟ್ಟು ಬಂದಿದ್ದಾರೆ.

ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿ ಕೊಟ್ಟಿದ್ದು, ಮಹಿಳೆಯರಿಗೆ ಉಚಿತ ಬಸ್ ಎಂಬುದು ಜಾರಿಯಲ್ಲಿದೆ. ಅದಕ್ಕೂ ಕೆಲವು ಅಡ್ಡಿ ಆತಂಕಗಳಿವೆ. ಉಳಿದ 4 ಗ್ಯಾರಂಟಿಗಳನ್ನು ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಕಾರ್ಯರೂಪಕ್ಕೆ ತರದೆ ಇದ್ದರೆ ಸದನದ ಒಳಗೆ ಮತ್ತು ಹೊರಗಡೆ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇಂದು ರಾತ್ರಿ 12 ಗಂಟೆಗೆ ಅಮೆರಿಕ ಸಂಸತ್ ಉದ್ದೇಶಿಸಿ ನಮ್ಮ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅಂತವರು ಪ್ರಧಾನಿಯಾಗಿ ಸಿಕ್ಕಿರುವುದು ನಮ್ಮ ಸೌಭಾಗ್ಯ ಎಂದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಜಗತ್ತಿನ 5 ನೇ ಅತಿ ದೊಡ್ಡ ಆರ್ಥಿಕ ಶಕ್ತಿಯ ದೇಶ ವಾಗಿದೆ. ಎಂಟು ವರ್ಷಗಳಲ್ಲಿ 530 ಬಿಲಿಯನ್ ಡಾಲರ್ ಬಂಡವಾಳವನ್ನು ಭಾರತದಲ್ಲಿ ಹೂಡಿಕೆ ಮಾಡಲಾ ಗಿದೆ. ಸ್ಟಾರ್ಟಪ್‌ನಲ್ಲಿ ವಿಶ್ವದ ಮೂರನೇ ರಾಷ್ಟ್ಟವಾಗಿದೆ. 2023ರಲ್ಲಿ ಅಮೆರಿಕಾ, ಚೀನಾಕ್ಕಿಂತಲೂ ಹೆಚ್ಚಿನ ಜಿಡಿಪಿ ಹೊಂದಿದೆ. ಈಗ ಭಾರತದ ಜಿಡಿಪಿ ಶೇ.9.1 ರಷ್ಟಿದೆ. ವಿವಿಧ ಯೋಜನೆಗಳ ಮೂಲಕ ಜನರ ಖಾತೆಗೆ ನೇರ ಹಣ ವರ್ಗಾವಣೆ ಆಗಿದೆ. ಆದರೂ, ಕರ್ನಾಟಕದ ಕಾಂಗ್ರೆಸ್‌ನವರು ಬಾಯಿ ಬಡುಕರಂತೆ ಮೋದಿಯವರ ಬಗ್ಗೆ ಮನ ಬಂದಂತೆ ಮಾತನಾಡುತ್ತಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :All the promises should be fulfilled by June 5, if not fulfilled, protest near the Gandhi statue of Vidhansouda.

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...