Wed,Feb04,2026
ಕನ್ನಡ / English

ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ! | JANATA NEWS

24 Jun 2023

ಹುಬ್ಬಳ್ಳಿ : ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಎಂಬುದು ಗೊತ್ತಿಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ ಎಂದು ನೂತನ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ರಂಟಿಗಳು ಬಡ ಜನತೆಗೆ ಅನುಕೂಲಕರವಾಗಿದ್ದು ಅವುಗಳನ್ನು ಸಹಿಸಿಕೊಳ್ಳುವ ಕೆಲಸ ಬಿಜೆಪಿ ಅವರಿಂದ ಆಗುತ್ತಿಲ್ಲ ಎಂದರು.

ಭಾರತೀಯ ಆಹಾರ ನಿಗಮದ (ಎಫ್ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಗದೀಶ್ ಶೆಟ್ಟರ್, ಇದು ಅಕ್ಷಮ್ಯ ಅಪರಾಧ' ಎಂದು ಆರೋಪಿಸಿದರು. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಬಡವರ ಊಟದ ವಿಚಾರದಲ್ಲಿ ಯಾರೂ ಸಹ ಇಂತಹ ಕಾರ್ಯ ಮಾಡಬಾರದು ಎಂದರು.

ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ ಬಿಜೆಪಿಯವರ ಹೇಳಿಕೆಯಂತೆ ಮೊದಲು ಕೇಂದ್ರದ ಅಪ್ಪಣೆ ಪಡೆದುಕೊಂಡು ನಾವು ಘೋಷಣೆ ಮಾಡಬೇಕಿತ್ತಾ? ಇದು ಒಕ್ಕೂಟ ವ್ಯವಸ್ಥೆಗೆ ಸರಿಯಾದ ಕ್ರಮವಲ್ಲ ಎಂದು ಶೆಟ್ಟರ ನುಡಿದರು.

ಮೊದಲಿಗೆ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಈಗ ರಾಜಕೀಯ ಕಾರಣಕ್ಕೆ ಅದನ್ನು ನಿರಾಕರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ರಾಜ್ಯಕ್ಕೆ ನೀಡಬೇಕು ಎಂದು ಒತ್ತಾಯಿಸಿದರು. ಈ ನಡುವೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.

ಸಂವಿಧಾನ ಬದ್ಧ ಹಾಗೂ ಒಕ್ಕೂಟ ವ್ಯವಸ್ಥೆಯಡಿ ಕಾಂಗ್ರೆಸ್ ಪಕ್ಷ ಕೇಂದ್ರದಿಂದ ಅಕ್ಕಿಯನ್ನು ಕೇಳುತ್ತಿದೆ. ಅದನ್ನು ಉಚಿತವಾಗಿ ಏನು ಕೇಳುತ್ತಿಲ್ಲ. ಹಣ ನೀಡುತ್ತೇವೆ ಎಂದರೂ ಸಹ ಅಕ್ಕಿ ನೀಡದೆ ರಾಜಕೀಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಡಿ ವಿವಿಧ ರಾಜ್ಯಗಳಿಂದ ಆಹಾರ ಧಾನ್ಯಗಳನ್ನು ಪಡೆದುಕೊಂಡು ಎಫ್‌ಸಿಐ ಅಡಿ ಸಂಗ್ರಹಿಸುತ್ತದೆ. ಆ ರೀತಿ ಸಂಗ್ರಹವಾದ ಅಕ್ಕಿಯನ್ನು ನಾವು ಕೇಳುತ್ತಿದ್ದೇವೆ ಇಲ್ಲವಾದರೆ ಕೇಂದ್ರ ಸರ್ಕಾರ ಧಾನ್ಯಗಳ ಸಂಗ್ರಹ ಅಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡಿ ಬಿಡಲಿ ಎಂದರು

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್‌ನಲ್ಲಿ ಚರ್ಚೆ ಮಾಡುತ್ತೇನೆ. ಈ ಭಾಗದ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳು ನೆನಗುದಿಗೆ ಬಿದ್ದಿವೆ, ಅವುಗಳನ್ನ ಆದಷ್ಟು ಬೇಗ ಪರಿಹಾರ ಮಾಡಲಿಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ. ರಾಜಕೀಯದಲ್ಲಿ ಬೇರೆ ಬೇರೆ ಅಧ್ಯಾಯಗಳಿರ್ತಾವೆ, ಇದು ನನ್ನ ಹೊಸ ಅಧ್ಯಾಯ, ಎರಡನೆಯ ಇನ್ನಿಂಗ್ಸ್ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಈಗಾಗಲೇ ನಮ್ಮ ಪಕ್ಷದ ವರಿಷ್ಠರ ಜತೆಗೆ ಚರ್ಚೆ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಾನು ಸಿದ್ದನಿದ್ದೇನೆ. ಎಲ್ಲಿಯೇ ಪ್ರವಾಸ ಮಾಡಿ ಅಂದ್ರು ನಾನು ನನ್ನ‌ ಸಮಯವನ್ನ ಕೊಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಗೆಲ್ಲಲು ನಾನೂ ಪ್ರಯತ್ನ ಮಾಡ್ತೇನಿ. ಈ ಚುನಾವಣೆಯಲ್ಲಿ ನಿಮ್ಮ‌ ಉಪಯೋಗ ತೆಗೆದುಕೊಳ್ಳುತ್ತೆವೆ ಎಂದು ನಮ್ಮ‌ ಪಕ್ಷ ಹೇಳಿದೆ ಎಂದರು.

RELATED TOPICS:
English summary :We are not attracting defeated BJP candidates. There is a rift, resentment is being created

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...