Sat,Mar21,2026
ಕನ್ನಡ / English

ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ! | JANATA NEWS

24 Jun 2023

ಹುಬ್ಬಳ್ಳಿ : ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಎಂಬುದು ಗೊತ್ತಿಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ ಎಂದು ನೂತನ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ರಂಟಿಗಳು ಬಡ ಜನತೆಗೆ ಅನುಕೂಲಕರವಾಗಿದ್ದು ಅವುಗಳನ್ನು ಸಹಿಸಿಕೊಳ್ಳುವ ಕೆಲಸ ಬಿಜೆಪಿ ಅವರಿಂದ ಆಗುತ್ತಿಲ್ಲ ಎಂದರು.

ಭಾರತೀಯ ಆಹಾರ ನಿಗಮದ (ಎಫ್ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಗದೀಶ್ ಶೆಟ್ಟರ್, ಇದು ಅಕ್ಷಮ್ಯ ಅಪರಾಧ' ಎಂದು ಆರೋಪಿಸಿದರು. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಬಡವರ ಊಟದ ವಿಚಾರದಲ್ಲಿ ಯಾರೂ ಸಹ ಇಂತಹ ಕಾರ್ಯ ಮಾಡಬಾರದು ಎಂದರು.

ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ ಬಿಜೆಪಿಯವರ ಹೇಳಿಕೆಯಂತೆ ಮೊದಲು ಕೇಂದ್ರದ ಅಪ್ಪಣೆ ಪಡೆದುಕೊಂಡು ನಾವು ಘೋಷಣೆ ಮಾಡಬೇಕಿತ್ತಾ? ಇದು ಒಕ್ಕೂಟ ವ್ಯವಸ್ಥೆಗೆ ಸರಿಯಾದ ಕ್ರಮವಲ್ಲ ಎಂದು ಶೆಟ್ಟರ ನುಡಿದರು.

ಮೊದಲಿಗೆ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಈಗ ರಾಜಕೀಯ ಕಾರಣಕ್ಕೆ ಅದನ್ನು ನಿರಾಕರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ರಾಜ್ಯಕ್ಕೆ ನೀಡಬೇಕು ಎಂದು ಒತ್ತಾಯಿಸಿದರು. ಈ ನಡುವೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.

ಸಂವಿಧಾನ ಬದ್ಧ ಹಾಗೂ ಒಕ್ಕೂಟ ವ್ಯವಸ್ಥೆಯಡಿ ಕಾಂಗ್ರೆಸ್ ಪಕ್ಷ ಕೇಂದ್ರದಿಂದ ಅಕ್ಕಿಯನ್ನು ಕೇಳುತ್ತಿದೆ. ಅದನ್ನು ಉಚಿತವಾಗಿ ಏನು ಕೇಳುತ್ತಿಲ್ಲ. ಹಣ ನೀಡುತ್ತೇವೆ ಎಂದರೂ ಸಹ ಅಕ್ಕಿ ನೀಡದೆ ರಾಜಕೀಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಡಿ ವಿವಿಧ ರಾಜ್ಯಗಳಿಂದ ಆಹಾರ ಧಾನ್ಯಗಳನ್ನು ಪಡೆದುಕೊಂಡು ಎಫ್‌ಸಿಐ ಅಡಿ ಸಂಗ್ರಹಿಸುತ್ತದೆ. ಆ ರೀತಿ ಸಂಗ್ರಹವಾದ ಅಕ್ಕಿಯನ್ನು ನಾವು ಕೇಳುತ್ತಿದ್ದೇವೆ ಇಲ್ಲವಾದರೆ ಕೇಂದ್ರ ಸರ್ಕಾರ ಧಾನ್ಯಗಳ ಸಂಗ್ರಹ ಅಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡಿ ಬಿಡಲಿ ಎಂದರು

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್‌ನಲ್ಲಿ ಚರ್ಚೆ ಮಾಡುತ್ತೇನೆ. ಈ ಭಾಗದ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳು ನೆನಗುದಿಗೆ ಬಿದ್ದಿವೆ, ಅವುಗಳನ್ನ ಆದಷ್ಟು ಬೇಗ ಪರಿಹಾರ ಮಾಡಲಿಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ. ರಾಜಕೀಯದಲ್ಲಿ ಬೇರೆ ಬೇರೆ ಅಧ್ಯಾಯಗಳಿರ್ತಾವೆ, ಇದು ನನ್ನ ಹೊಸ ಅಧ್ಯಾಯ, ಎರಡನೆಯ ಇನ್ನಿಂಗ್ಸ್ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಈಗಾಗಲೇ ನಮ್ಮ ಪಕ್ಷದ ವರಿಷ್ಠರ ಜತೆಗೆ ಚರ್ಚೆ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಾನು ಸಿದ್ದನಿದ್ದೇನೆ. ಎಲ್ಲಿಯೇ ಪ್ರವಾಸ ಮಾಡಿ ಅಂದ್ರು ನಾನು ನನ್ನ‌ ಸಮಯವನ್ನ ಕೊಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಗೆಲ್ಲಲು ನಾನೂ ಪ್ರಯತ್ನ ಮಾಡ್ತೇನಿ. ಈ ಚುನಾವಣೆಯಲ್ಲಿ ನಿಮ್ಮ‌ ಉಪಯೋಗ ತೆಗೆದುಕೊಳ್ಳುತ್ತೆವೆ ಎಂದು ನಮ್ಮ‌ ಪಕ್ಷ ಹೇಳಿದೆ ಎಂದರು.

RELATED TOPICS:
English summary :We are not attracting defeated BJP candidates. There is a rift, resentment is being created

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...