Sat,Jun20,2026
ಕನ್ನಡ / English

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ: ಯತ್ನಾಳ್ ವಿದಾತ್ಮಕ ಹೇಳಿಕೆ | JANATA NEWS

25 Jun 2023

ಬೆಳಗಾವಿ : ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತು.ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದ್ರೇ ಇದೇ ಗತಿ ಆಗೋದು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ತಾಸು ಕುಳಿತು ಸಭೆ ಮಾಡಿ ಎಂದು ಸಲಹೆ ನೀಡಿದರು.

ಈ ಸರ್ಕಾರ ಐದು ವರ್ಷ ನಡೆಯುವ ಸರ್ಕಾರ ಅಲ್ಲ ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತದೆ . ಅಷ್ಟರಲ್ಲಿ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಅಂತ ಹೇಳಿದರು. ಇನ್ನೂ ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ ಅಂತ ಅವರು ತಿಳಿಸಿದರು.

ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ.

ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದರು.

ಗ್ಯಾರಂಟಿ ಎಲ್ಲವೂ ಮುಗಿತು ಇವರಿಗೆ ಗ್ಯಾರಂಟಿ ಕೊಡೊಕೆ ಸಾಧ್ಯವಿಲ್ಲ.ಈಗ ಹೇಗೆ ಒದ್ದಾಡುತ್ತಿದ್ದಾರೆ ಎಲ್ಲರೂ.ಯಾವ ಸರ್ಕಾರ ಬಂದರೂ ಇದು ಮಾಡಲು ಆಗುವುದಿಲ್ಲ.ಹಾಗಿದ್ದಿದ್ರೇ ಬೊಮ್ಮಾಯಿ ಅವರು ಕೊಡುತ್ತಿದ್ದರು. ಒಂದು ರೀತಿ ಕರ್ನಾಟಕದಲ್ಲಿ ಅರಾಜಕತೆ ಶುರುವಾಗಿದೆ. ಪಾಕಿಸ್ತಾನದ ಧ್ವಜ ಹಾರಾಡುತ್ತಿವೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿವೆ‌.ನಾವು ಎಲ್ಲದಕ್ಕೂ ತಯಾರಾಗಬೇಕು ಇಲ್ಲವಾದರೆ ಮನೆಗೆ ಬಂದು ಹೊಡೆಯುತ್ತಾರೆ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡ್ತಾರೆ.ಬೊಮ್ಮಾಯಿಯವರೇ ಅವರನ್ನ ನೀವು ಮನೆ ವರೆಗೂ ಬಿಟ್ಟುಕೊಳ್ಳಬೇಡಿ.ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌.ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲಾ ಅಂತಾ ಹೇಳಿ.ಅವರನ್ನ ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಅಲ್ಲಿಗೆ ಹೋಗಿ ಎಂದು ಕಿಡಿ ಕಾರಿದರು.

ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ.ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಎನ್ ಹೇಳಿದರು ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ, ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದರು.

RELATED TOPICS:
English summary :Siddaramaiah, DK Sivakumar fight each other: Yatnal scholarly statement

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...