Tue,Aug04,2026
ಕನ್ನಡ / English

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ: ಯತ್ನಾಳ್ ವಿದಾತ್ಮಕ ಹೇಳಿಕೆ | JANATA NEWS

25 Jun 2023

ಬೆಳಗಾವಿ : ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತು.ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದ್ರೇ ಇದೇ ಗತಿ ಆಗೋದು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ತಾಸು ಕುಳಿತು ಸಭೆ ಮಾಡಿ ಎಂದು ಸಲಹೆ ನೀಡಿದರು.

ಈ ಸರ್ಕಾರ ಐದು ವರ್ಷ ನಡೆಯುವ ಸರ್ಕಾರ ಅಲ್ಲ ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತದೆ . ಅಷ್ಟರಲ್ಲಿ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಅಂತ ಹೇಳಿದರು. ಇನ್ನೂ ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ ಅಂತ ಅವರು ತಿಳಿಸಿದರು.

ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ.

ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದರು.

ಗ್ಯಾರಂಟಿ ಎಲ್ಲವೂ ಮುಗಿತು ಇವರಿಗೆ ಗ್ಯಾರಂಟಿ ಕೊಡೊಕೆ ಸಾಧ್ಯವಿಲ್ಲ.ಈಗ ಹೇಗೆ ಒದ್ದಾಡುತ್ತಿದ್ದಾರೆ ಎಲ್ಲರೂ.ಯಾವ ಸರ್ಕಾರ ಬಂದರೂ ಇದು ಮಾಡಲು ಆಗುವುದಿಲ್ಲ.ಹಾಗಿದ್ದಿದ್ರೇ ಬೊಮ್ಮಾಯಿ ಅವರು ಕೊಡುತ್ತಿದ್ದರು. ಒಂದು ರೀತಿ ಕರ್ನಾಟಕದಲ್ಲಿ ಅರಾಜಕತೆ ಶುರುವಾಗಿದೆ. ಪಾಕಿಸ್ತಾನದ ಧ್ವಜ ಹಾರಾಡುತ್ತಿವೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿವೆ‌.ನಾವು ಎಲ್ಲದಕ್ಕೂ ತಯಾರಾಗಬೇಕು ಇಲ್ಲವಾದರೆ ಮನೆಗೆ ಬಂದು ಹೊಡೆಯುತ್ತಾರೆ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡ್ತಾರೆ.ಬೊಮ್ಮಾಯಿಯವರೇ ಅವರನ್ನ ನೀವು ಮನೆ ವರೆಗೂ ಬಿಟ್ಟುಕೊಳ್ಳಬೇಡಿ.ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌.ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲಾ ಅಂತಾ ಹೇಳಿ.ಅವರನ್ನ ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಅಲ್ಲಿಗೆ ಹೋಗಿ ಎಂದು ಕಿಡಿ ಕಾರಿದರು.

ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ.ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಎನ್ ಹೇಳಿದರು ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ, ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದರು.

RELATED TOPICS:
English summary :Siddaramaiah, DK Sivakumar fight each other: Yatnal scholarly statement

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ನ್ಯೂಸ್ MORE NEWS...