Tue,Aug04,2026
ಕನ್ನಡ / English

ಸೋಲಾಗಿದ್ದು ಕಾರ್ಯಕರ್ತರಿಂದಲ್ಲ, ಬಿಜೆಪಿ ಪಕ್ಷದ ತಪ್ಪು ನಿರ್ಧಾರದಿಂದ: ರೇಣುಕಾಚಾರ್ಯ | JANATA NEWS

27 Jun 2023

ದಾವಣಗೆರೆ : 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲೋದಕ್ಕೆ 8 ಕಾರಣಗಳ ಪಟ್ಟಿ ಕೊಟ್ಟಿದ್ದಾರೆ ಮಾಜಿ ಸಚಿವ ರೇಣುಕಾಚಾರ್ಯ. ನಮ್ಮ ಸರ್ಕಾರದ ತಪ್ಪು ನಿರ್ಧಾರಗಳಿಂದ ನಾವು ಸೋತಿದ್ದಾಗಿ ಹೇಳಿದ್ದಾರೆ.

ಈ ವಿಚಾರವಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿರುವ ಅವರು, ಡಾ. ಸುಧಾಕರ್ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ರು ಎಂದು ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.

ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಅಂತ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಒಂದು ವೇಳೆ, ಅವರೇ ಐದು ವರ್ಷ ಮುಂದುವರಿದಿದ್ದರೆ ಈ ಬಾರಿಯೂ ನಮ್ಮದೇ ಸರ್ಕಾರ ಬರುತ್ತಿತ್ತು ಎಂದು ಅವರು ಹೇಳಿದ್ದಾರೆ.

ನಾನು ಒಳಮೀಸಲಾತಿ ಕೊಡಬೇಡಿ ಎಂದು ಈ ಮೊದಲೇ ಹೇಳಿದ್ದೆ. ಆದರೆ ಚುನಾವಣಾ ಹೊತ್ತಲ್ಲಿ ಜಾರಿ ಮಾಡಿದ್ದು ಭಾರೀ ಪೆಟ್ಟು ಕೊಟ್ಟಿತು. ಕೇಂದ್ರ ಸರ್ಕಾರದ ಅಕ್ಕಿ ಕೊಡೋದು ನಿಲ್ಲಿಸಬೇಡಿ ಅಂತೆಯೂ ಹೇಳಿದ್ದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಬಡ ಜನರ ತಿನ್ನುವ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡಿದರು‌. ಹತ್ತು ಕೆಜಿ ಅಕ್ಕಿ ನೀಡುವುದು ಬಿಟ್ಟು ಕಡಿತ ಮಾಡಿದರು ಅಂತ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಎನ್‌ಪಿಎಸ್ ನೌಕರರ ಮನವಿಯನ್ನು ಸ್ವೀಕಾರ ಮಾಡಿ ಎಂದು ಹೇಳಿದರೂ ಮಾಡಲಿಲ್ಲ ಅಂತ ಬೇಸರ ವ್ಯಕ್ತಪಡಿಸಿದರು.

ಡಾ ಸುಧಾಕರ್‌ ಅವರು ಬೊಮ್ಮಾಯಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಕೆಲಸಕ್ಕೆ ಬಾರದ ಪ್ರನಾಳಿಕೆ ಮಾಡಿದ್ದಾರೆ ಎಂದು ಸ್ವಪಕ್ಷದ ವಿರುದ್ದ ಅಕ್ರೋಶಗೊಂಡರು. ರೇಣುಕಾಚಾರ್ಯ ಗೆ ಒಬ್ಬನಿಗೆ ಅಲ್ಲ ರಾಜ್ಯದ ಎಲ್ಲಾ ಕಾರ್ಯಕರ್ತರಿಗೆ ನೋವಾಗಿದೆ ಅಂತ ಹೇಳಿದ್ರು.

ಈಶ್ವರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ಅನ್ನು ನಿರಾಕರಿಸಿದ್ದು ಬಹುದೊಡ್ಡ ತಪ್ಪು. ಅವರಿಗೇನು ಮಹಾ ವಯಸ್ಸಾಗಿತ್ತು. ಅವರೇನು ತಪ್ಪು ಮಾಡಿದ್ದರು ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

ರಾಜ್ಯದ ಅಧ್ಯಕ್ಷರು ಗೊಂದಲದ ಹೇಳಿಕೆ ನೀಡುತ್ತಾ ಬಂದಿದ್ದಾರೆ.‌ ರಾಜೀನಾಮೆ ನೀಡುತ್ತೇನೆ, ಒಮ್ಮೆ ನೀಡೋದಿಲ್ಲ ಅಂತ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಅಂತ ರೇಣುಕಾಚಾರ್ಯ ಹೇಳಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಶಾಸಕನಾಗಿ, ಸಚಿವನಾಗಿ ಅನುಭವವಿದೆ. ಆದರೆ ಒತ್ತಡ ಮಾಡುವುದಿಲ್ಲ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ರಾಜ್ಯಾಧ್ಯಕ್ಷ ಪಟ್ಟದ ಆಸೆಯನ್ನು ಬಹಿರಂಗಪಡಿಸಿದ್ದಾರೆ.

RELATED TOPICS:
English summary :Defeated not by activists, but by wrong decision of BJP party: Renukacharya

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...