ಪದವಿ ಮುಗಿಸಿದ್ದರೂ ಉದ್ಯೋಗವಿಲ್ಲ, ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ನೇಣಿಗೆ ಶರಣಾದ ಯುವಕ ! | JANATA NEWS
ಯಲ್ಲಾಪುರ : ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ನಡೆದಿದೆ ನಡೆದಿದೆ.
ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೇಲಂಗಾರ ನಿವಾಸಿ ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ್ ಎಂದು ಗುರುತಿಸಲಾಗಿದೆ.
ಇತ ಕೆಲವು ವರ್ಷಗಳ ಹಿಂದೆ ಪದವಿ ಮುಗಿಸಿದ್ದರೂ, ಓದಿಗೆ ತಕ್ಕ ಹಾಗೆ ಕೆಲಸ ಸಿಕ್ಕಿಲ್ಲ. ಇದರಿಂದ ಮದುವೆಯಾಗಲು ಹೆಣ್ಣು ಕೂಡ ಸಿಗುತ್ತಿರಲಿಲ್ಲವಂತೆ. ಇದೇ ಕಾರಣಕ್ಕೆ ಮನನೊಂದಿದ್ದ ಯುವಕ, ಖಿನ್ನತೆಗೆ ಒಳಗಾಗಿ ಇದೀಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
English summary :Even after graduation, there is no job, the young man surrendered to hanging himself without finding a girl to marry!