ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ! | JANATA NEWS
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಕೇಂದ್ರೀಕೃತ ಬಹುನಿರೀಕ್ಷೆಯ ತಮ್ಮ 14ನೇ ಬಜೆಟ್ ಇಂದು ಮಂಡನೆ ಮಾಡಲಿದ್ದಾರೆ.
ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನ ನೀಡಿರುವ ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ರಾಜ್ಯದ ಜನರಿಗೆ ಬೆಟ್ಟದಷ್ಟು ನಿರೀಕ್ಷೆ ಗರಿಗೆದರಿವೆ.
13 ಬಾರಿ ಬಜೆಟ್ ಮಂಡಿಸಿ ಇದೀಗ 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಲೆಕ್ಕರಾಮಯ್ಯರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ. 13 ಬಾರಿ ಬಜೆಟ್ ಮಂಡಿಸಿ ಇದೀಗ 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಲೆಕ್ಕರಾಮಯ್ಯರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.
ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ನಲ್ಲಿ ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವ ಹೊಣೆಗಾರಿಕೆ, ಅನಿವಾರ್ಯತೆಯಲ್ಲಿ ಆಯವ್ಯಯ ಮಂಡಿಸಲಿದ್ದಾರೆ. ಪಂಚ ಗ್ಯಾರಂಟಿಗಳಿಗೆ ಎಲ್ಲಿಂದ ಹಣ ಹೊಂದಿಸಲಾಗುತ್ತೆ ಎಂಬ ಕುತೂಹಲ, ಹತ್ತು ಹಲವು ಪ್ರಶ್ನೆಗಳಿಗೆ ಬಜೆಟ್ನಲ್ಲಿ ಉತ್ತರ ಸಿಗಲಿದೆ.