Tue,Aug04,2026
ಕನ್ನಡ / English

ಹಿಂದೂ ಎಂಬುದು ಧರ್ಮವೇ ಅಲ್ಲ, ಲಿಂಗಾಯತವನ್ನು ಸ್ವತಂತ್ರ ಧರ್ಮವೆಂದು ಪರಿಗಣಿಸಿ: ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ | JANATA NEWS

09 Jul 2023

ಧಾರವಾಡ : ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಿದೆ. ಬಸವಣ್ಣನವರು ಇದರ ಸ್ಥಾಪಕರು ಎಂದಿದ್ದಾರೆ.

ಲಿಂಗಾಯತ ಅನ್ನೋದು ಒಂದು ಸ್ವತಂತ್ರ ಧರ್ಮ. ಇದಕ್ಕೆ ಬಸವಣ್ಣನವರು ಸಂಸ್ಥಾಪಕರು. ವಚನ ಸಾಹಿತ್ಯ ಇದರ ಸಂವಿಧಾನ. ನಾವೆಲ್ಲರೂ ಇಷ್ಟ ಲಿಂಗವನ್ನು ಪೂಜಿಸುವಂತಹವರು. ಇದು ಬಹಳ ಮುಖ್ಯ. ಹಿಂದೂ ಧರ್ಮ ಅಂತ ನಾವೇನು ಹೇಳುತ್ತೇವೋ ಅಲ್ಲಿ ಯಾವುದೇ ಪ್ರವರ್ತಕ, ಪ್ರವಾದಿ ಇಲ್ಲ. ಅದಕ್ಕೊಂದು ನಿರ್ದಿಷ್ಟ ಗ್ರಂಥ ಆಗಲಿ, ದೇವರಾಗಲಿ ಇಲ್ಲ. 33 ಕೋಟಿ ದೇವತೆಗಳನ್ನು ಪೂಜಿಸುತ್ತಾರೆ. ಅದು ವೈಧಿಕ ಧರ್ಮ. ಅದನ್ನೇ ಇವತ್ತು ಹಿಂದೂ ಧರ್ಮ ಅಂತ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದರು.

ಇವತ್ತು ಭಗವದ್ಗೀತೆಯ ಬಗ್ಗೆ ಅವರು ಮಾತನಾಡುತ್ತಾರೆ. ಆದರೆ ಭಗವದ್ಗೀತೆಯ 18 ಅಧ್ಯಾಯದ ಯಾವ ಒಂದು ಶ್ಲೋಕದಲ್ಲೂ ಹಿಂದೂ ಎಂಬ ಶಬ್ಧ ಪ್ರಯೋಗ ಆಗಿಲ್ಲ. ಜೊತೆಗೆ ವೇದಗಳಲ್ಲಿ, ಉಪನಿಷತ್​ಗಳಲ್ಲೂ ಪ್ರಯೋಗ ಆಗಿಲ್ಲ. ಅದೊಂದು ಜೀವನ ಮಾರ್ಗ. ಹಾಗಾಗಿ ನಾವು ಸ್ವತಂತ್ರ ಧರ್ಮದ ಮಾನ್ಯತೆಯನ್ನು ಪಡೆಯುವುದರಿಂದ ಹಿಂದೂ ಧರ್ಮದ ವಿರೋಧಿಗಳು ಆಗುವುದಿಲ್ಲ ಎಂದು ತಿಳಿಸಿದರು.

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವೆಂದು ಮಾನ್ಯತೆ ಸಿಗಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಪುನಃ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Hinduism is not a religion, consider Lingayat as an independent religion: Tondarya Siddarama Swamiji

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...