ಹೆಚ್ಡಿಕೆ ಪೆನ್ಡ್ರೈವ್ ಸತ್ಯಾಸತ್ಯತೆ ತನಿಖೆ ಮಾಡ್ತೇವೆ: ಸಚಿವ ಎಂ ಬಿ ಪಾಟೀಲ್ | JANATA NEWS
ವಿಜಯಪುರ : ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಪೆನ್ಡ್ರೈವ್ ಬಿಡುಗಡೆ ಮಾಡಿದರೆ ಅದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಪೆನ್ ಡ್ರೈವ್ನಲ್ಲಿರುವ ಸತ್ಯಾಸತ್ಯತೆ ತಿಳಿದು ಕೊಳ್ಳಬೇಕಾಗುತ್ತೆ, ವೈಸ್ ಡಿಟೆಕ್ಷನ್ ಸರಿಯಾಗಿದೆಯಾ ಎನ್ನೊದನ್ನ ಕೇಳ್ಬೇಕಾಗುತ್ತೆ ಈಗೆಲ್ಲ ಮಿಮಿಕ್ರಿ ಬೇರೆ ಮಾಡ್ತಾರೆ. ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ. ಯಾರು ಮಾತನಾಡಿದ್ದಾರೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲವು ಕೂಡ ತನಿಖೆಯಾಗ ಬೇಕಾಗುತ್ತೆ ಎಂದರು. ಕುಮಾರಸ್ವಾಮಿ ಅವರು ಪೆನ್ಡ್ರೈವ್ ಬಿಡುಗಡೆ ಮಾಡಿದಾಗ ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.
ಮಠಮಾನ್ಯಗಳ ಅನುದಾನ ಕಡಿತ ಮಾಡಿದ್ದಾರೆ ಎಂಬ ಮಾಜಿ ಸಚಿವ ಸಿಸಿ ಪಾಟೀಲ್ ಆರೋಪದ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ ಕೊಡುತ್ತೇವೆ. ಮಠ ಮಾನ್ಯಗಳ ಬಗ್ಗೆ ಅಪಾರ ಗೌರವ ಇದೆ. ಸಿ.ಸಿ.ಪಾಟೀಲ್ ಮಠ ಇದ್ದರೂ ಹೇಳಲಿ, ಅವರಿಗೂ ಹಣ ಕೊಡುತ್ತೇವೆ. ನಾವು ಭೇದ ಭಾವ ಮಾಡಲ್ಲ. ಹಿಂದೂ ಮಠಗಳು, ಕ್ರಿಶ್ಚಿಯನ್ ಚರ್ಚಗಳಿಗೆ, ಮುಸ್ಲಿಂ ಮಸೀದಿ, ಜೈನರ ಬಸದಿ, ಬೌದ್ಧ ವಿಹಾರಗಳನ್ನ ಸಮಾನವಾಗಿ ಕಾಣುತ್ತೇವೆ. ಎಲ್ಲರಿಗೂ ಅನುದಾನ ಕೊಡುತ್ತೇವೆ ಎಂದರು.