Sat,Mar21,2026
ಕನ್ನಡ / English

ಜೈನ ಮುನಿ ಪ್ರಕರಣ: ಕಠಿಣ ಶಿಕ್ಷೆ ಎಂದರೆ ಏನು? ಆರೋಪಿಗಳಿಗೆ ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು | JANATA NEWS

11 Jul 2023

ಹುಬ್ಬಳ್ಳಿ : ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಠಿಣ ಶಿಕ್ಷೆ ಎಂದರೆ ಏನು? ನಮ್ಮ ಸಿಸ್ಟಮ್ ಸರಿ ಇಲ್ಲ. ಒಂದು ವರ್ಷದಲ್ಲಿ ಅವರು ಹೊರಗೆ ಬರುತ್ತಾರೆ. ಉತ್ತರಪ್ರದೇಶ ಮಾದರಿಯಲ್ಲಿ ಮೂವರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು. ಕ್ರೌರ್ಯ ಕ್ರೌರ್ಯವೇ. ಅವರು ಯಾರೇ ಆಗಲಿ ಅವರ ಮನೆ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಮಕುಮಾರ ನಂದಿ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಆದರೆ, ಸಿಬಿಐ ಕೇವಲ ಬುರುಡೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂದೂಗಳ ಹತ್ಯೆ ಪ್ರಕರಣಗಳನ್ನು ಸಿಬಿಐಗೆ ಕೊಟ್ಟರು, ನಂತರ ಏನಾಯ್ತು? 22 ಪ್ರಕರಣಗಳಿಗೆ ನ್ಯಾಯ ಸಿಕ್ಕಿದೆಯೇ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ ಸರ್ಕಾರ ಬಂದ ಮೇಲೆ ಹಿಂದೂ ವಿರೋಧಿ ವಾತಾವರಣ ಸೃಷ್ಠಿಯಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಆತಂಕ ಇತ್ತು. ಬಿಜೆಪಿ ಸರ್ಕಾರವಿದ್ದಾಗಲೂ ಹಿಂದೂ ಕಾರ್ಯಕರ್ತರ ಹತ್ಯೆ ಆಗಿದೆ. ಅದಕ್ಕಾಗಿ ಬಿಜೆಪಿಯವರನ್ನು ಕರ್ನಾಟಕದಲ್ಲಿ ನೆಲಸಮ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್​ ಮುತಾಲಿಕ್​ ಹೇಳಿದ್ದಾರೆ.

ಹೀರೆಕುಡಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ತಾಲೂಕಿನ ವರೂರ್ ಜೈನ್ ಮಂದಿರಕ್ಕೆ ಭೇಟಿ ನೀಡಿದ ಮುತಾಲಿಕ್ ಜೈನಮುನಿ ಗುಣಧರನಂದಿ ಮಹಾರಾಜ್ ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕಾಮಕುಮಾರ ನಂದಿ ಶ್ರೀಗಳ ಹಿನ್ನೆಲೆ ಬಗ್ಗೆ ಚರ್ಚೆ ಮಾಡಿದ ಅವರು, ಜೈನ ಧರ್ಮದ ಜೊತೆಗೆ ಹಿಂದೂಪರ ಸಂಘಟನೆಗಳು ಇವೆ ಎಂಬ ಭರವಸೆಯನ್ನು ನೀಡಿದರು.

ಪರೇಶ್ ಮೇಸ್ತಾ ಪ್ರಕರಣ ಯಾವ ಹಂತದಲ್ಲಿದೆ?22 ಕೇಸ್‌ಗಳಿಗೆ ನ್ಯಾಯ ಸಿಕ್ಕಿದೆಯಾ? ಬಿಜೆಪಿಯವರು ಇದೀಗ ಸಿಬಿಐಗೆ ವಹಿಸಿ ಎಂದು ಹೇಳುತ್ತಿದ್ದಾರೆ. ಇವರೇನು ಸಾಚಾಗಳಾ? ರಾಜಕಾರಣಿಗಳು ನಿರ್ಲಜ್ಜರು. ನಾನು ಹಿಂದೂತ್ವ ಉಳಿಸಲು ರಾಜಕಾರಣಕ್ಕೆ ಬಂದಿದ್ದೇನೆ. ರಾಜಕಾರಣ ಮಾಡಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಜೈನ ಸ್ವಾಮೀಜಿಯ ಹತ್ಯೆ ನಾವು ಖಂಡಿಸುತ್ತೇವೆ. ನಾನು ಅಲ್ಲಿಗೆ ಭೇಟಿ ಕೊಟ್ಟು ಬಂದಿದ್ದೇನೆ. ಮಠದಲ್ಲಿ ಸ್ವಾಮೀಜಿ ಒಬ್ಬರೇ ಇರುತ್ತಿದ್ದರು. ಹೀರೆಕುಡಿಯಿಂದ ಮಠ ಸುಮಾರು 2 ಕಿಲೋ ಮೀಟರ್ ದೂರ ಇದೆ. ಒಂಟಿತನ ನೋಡಿ ವ್ಯವಸ್ಥಿತವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಸಾಮಾನ್ಯ ಕೊಲೆ ಅಲ್ಲ. ಕುರಿ, ಕೋಳಿ ಕತ್ತರಿಸುವ ರೀತಿಯಲ್ಲಿ ಹತ್ಯೆ ಮಾಡಿದ್ದಾರೆ.

ಘಟನೆಯ ಸಂಪೂರ್ಣ ಮಾಹಿತಿಯನ್ನು ಸರ್ಕಾರ ಹೊರ ಹಾಕಬೇಕು. ಇದರ ಹಿಂದೆ ಹಣದ ಕಾರಣ ಇಲ್ಲ, ಬೇರೆ ಏನೋ ಷಡ್ಯಂತ್ರ ಇದೆ. ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮಾದರಿಯಲ್ಲಿ ಮೂರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು.

ಕೊಲೆಗಾರರದ್ದು ತಾಲಿಬಾನ್ ಮನಸ್ಥಿತಿ. ಇದರಲ್ಲಿ ಮುಚ್ಚು ಮರೆ ಮಾಡಿದರೆ ದೇಶಕ್ಕೆ ಅಪಾಯಕಾರಿ. ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಎಲ್ಲರೂ ಬಾಯಿ ಮುಚ್ಚಿ. ತನಿಖೆಗೆ ಮುಕ್ತ ಅವಕಾಶ ಕೊಡಬೇಕು. ಯಾರೂ ಯಾವುದೇ ಒತ್ತಾಯಕ್ಕೆ ಮಣಿಯಬಾರದು. ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು. ಯಾರೂ ಅವರ ಪರ ವಕಾಲತ್ತು ಮಾಡಬಾರದು ಎಂದು ನಾನು ವಕೀಲರ ಸಂಘಕ್ಕೆ ಮನವಿ ಮಾಡುತ್ತೇನೆ. ಎಂದು ಪ್ರಮೋದ್ ಮುತಾಲಿಕ್ ಹೇಳಿದರು.

RELATED TOPICS:
English summary :The CBI is only concerned with the killing of Hindu activists in both the Burude, Congress and BJP governments

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...