ಮಣಿಪಾಲದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ, ಮಹಿಳೆಯರ ರಕ್ಷಣೆ | JANATA NEWS
ಮಂಗಳೂರು : ತಾಲೂಕಿನ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಭವಾನಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ, ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ದಂಧೆ ನಡೆಸುತ್ತಿದ್ದ ಅಬ್ದುಲ್ ಸಲಾಮತ್, ಚಂದ್ರಹಾಸ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ರಕ್ಷಣೆ ಮಾಡಲ್ಪಟ್ಟ 3 ಜನ ಬೆಂಗಳೂರು ಮೂಲದವರಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈ ವಾಸಿಗಳಾಗಿದ್ದಾರೆ.
ಈ ದಂಧೆಗೆ ಬಳಸಿದ 4 ಮೊಬೈಲ್ ಫೋನ್, 1 ಕಾರು , 2 ಮೋಟಾರ್ ಸೈಕಲ್ ಹಾಗೂ 10 ಸಾವಿರ ರೂಪಾಯಿಯನ್ನು ಜಪ್ತಿ ಮಾಡಲಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Police raid house where prostitution was conducted in Manipal, rescue of women