Fri,Dec12,2025
ಕನ್ನಡ / English

ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಕೇಸ್‌ಗೆ ಟ್ವಿಸ್ಟ್, ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು | JANATA NEWS

25 Jul 2023

ಮಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವೀಡಿಯೋ ಸೆರೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ನಂತರ ಕಾಲೇಜು ಆಡಳಿತ ಮಂಡಳಿಯು ಸ್ಪಷ್ಟೀಕರಣವನ್ನು ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.

ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮಕ್ಕಳು ತಪ್ಪೊಪ್ಪಿಗೆ ಕೊಟ್ಟ ನಂತರವೂ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಕಾಲೇಜ್ ಗೆ ಮೊಬೈಲ್ ತರುವಂತಿಲ್ಲ, ಕಾನೂನು ಮೀರಿದ ಕಾರಣ ಮೊಬೈಲನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ. ತಮಾಷೆಯ ವೀಡಿಯೋ ಮಾಡಿರುವುದಾಗಿ ಮೂವರು ಹೇಳಿದ್ದಾರೆ. ಮೊಬೈಲ್ ಕೊಡುವಾಗಲೇ ಅದರಲ್ಲಿ ವೀಡಿಯೋ ಇರಲಿಲ್ಲ. ವಾಶ್ ರೂಮ್ ಗೆ ಹೋದಾಗ ಮೊಬೈಲ್ ನೋಡಿದೆ, ತಕ್ಷಣ ಹೊರಗೆ ಬಂದೆ. ಸ್ಥಳದಲ್ಲೇ ವಿಡಿಯೋ ಡಿಲೀಟ್ ಮಾಡಿಸಿರುವುದಾಗಿ ಯುವತಿ ಹೇಳಿದ್ದಾಳೆ ಎಂದರು.

ನೂರಾರು ವಿದ್ಯಾರ್ಥಿನೀಯರ ಚಿತ್ರೀಕರಣ ಮಾಡಲಾಗಿದೆ ಎನ್ನುವುದು ಸರಿಯಲ್ಲ. ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ. ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಇದು ನನ್ನ ಮನವಿ.

ಇನ್ನು ಯಾರೊಬ್ಬರೂ ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ. ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡಲ್ಲ. ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ನೀಡಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮೀ ಕೃಷ್ಣಪ್ರಸಾದ್ ಮಾಹಿತಿಯನ್ನು ನೀಡಿದ್ದಾರೆ.

ಘಟನೆ -

ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಮೂವರು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆ ನಗ್ನ ಚಿತ್ರಗಳನ್ನು ರೆಕಾರ್ಡ್‌ ಮಾಡಿದ್ದಾರೆ. ನಂತರ, ಅವುಗಳನ್ನು ಅವರದ್ದೇ ಸಮುದಾಯದ ಯವಕರಿಗೆ ಕಳುಹಿಸಲಾಗುತ್ತದೆ. ನಂತರ, ಆ ವೀಡಿಯೋಗಳನ್ನು ಕೆಲವೊಂದು ವಾಟ್ಸಾಪ್‌ ಗುಂಪುಗಳಿಗೆ ಹಂಚಿಕೊಳ್ಳಲಾಗತ್ತಿತ್ತು. ಈ ಬಗ್ಗೆ ಹಿಂದೂ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿದು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಇದನ್ನು ಪರಿಶೀಲನೆ ಮಾಡಿದ ಕಾಲೇಜು ಆಡಳಿತ ಮಂಡಳಿಯವರು, ಕ್ಯಾಮರಾ ಇಟ್ಟಿದ್ದ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿದ್ದ ವೀಡಿಯೋಗಳನ್ನು ಡಿಲೀಟ್‌ ಮಾಡಿಸಿದ್ದಾರೆ.

RELATED TOPICS:
English summary :Twist in the case of filming in the college toilet, the college has been suspended

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...