ಎಐಸಿಸಿ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲು | JANATA NEWS
ಕಲಬುರ್ಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ಆರೋಪಿಸಿ ಕಾಂಗ್ರೆಸ್ ನಾಯಕರು ಹರಿ ಹಾಯ್ದಿದ್ದರು.
ಈ ಹಿನ್ನಲೆಯಲ್ಲಿ ಕಲಬುರ್ಗಿ ನಗರದ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗೃಹ ಸಚಿವ ಅರಗ ಜ್ಞಾನೇಂದ್ರ ಅವರುಟ್ವೀಟ್ ಮಾಡಿ, ಹೇಳಿಕೆಗಳನ್ನು ತಿರುಚಿ ತಮ್ಮ ರಾಜಕೀಯ ದುರುದ್ದೇಶಕ್ಕೆ ಬಳಸುವುದರಲ್ಲಿ ಕಾಂಗ್ರೆಸ್ಸಿನವರು ನಿಸ್ಸೀಮರು. ನಾನು ಉತ್ತರ ಕರ್ನಾಟಕದ ಬಿಸಿಲಿನ ತಾಪದ ಬಗ್ಗೆ ಉಲ್ಲೇಖ ಮಾಡಿ, ಅದಕ್ಕೆ ಖರ್ಗೆ ಅವರ ಉದಾಹರಣೆ ನೀಡಿದ್ದೇನೆ ಅಷ್ಟೇ. ಅರಣ್ಯ ಸಚಿವರಾಗಿರುವವರು ಹೆಚ್ಚಿನವರು ಆ ಭಾಗದ ಜನಪ್ರತಿನಿಧಿಗಳೇ ಆಗಿರುವುದರಿಂದ ಮಲೆನಾಡ ಜನಗಳ, ಇಲ್ಲಿನ ಮರಗಿಡಗಳ ಸಮಸ್ಯೆ ಬಗ್ಗೆ ಅವರಿಗೆ ಅರಿವು ಇರುವುದಿಲ್ಲ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದೇನೆ ವಿನಃ ಖರ್ಗೆ ಅವರ ಬಗ್ಗೆ ಯಾವುದೇ ಅವಹೇಳನ ಮಾಡಿಲ್ಲ. ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ಇಂತಹ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ಕಾಂಗ್ರೆಸ್ನವರು ನಿಲ್ಲಿಸಬೇಕು. ದಲಿತರನ್ನು ಗೌರವಿಸುವುದನ್ನು ಕಾಂಗ್ರೆಸ್ನಿಂದ ನಾವು ಕಲಿಯಬೇಕಾಗಿಲ್ಲ. ಡಾ.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಂಡಿದೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ರಾಜ್ಯದ ಜನತೆ ದಡ್ಡರಲ್ಲ" ಎಂದು ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದಾರೆ.
..ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆಯವರನ್ನು ಟೀಕಿಸುವ ಭರದಲ್ಲಿ, ಬೇರೆಯವರ ಹೆಸರು ತಪ್ಪಾಗಿ ಉಚ್ಚರಿಸಿದ್ದು, ಇದಕ್ಕಾಗಿ ವಿಷಾದಿಸುತ್ತೇನೆ. ರಾಷ್ಟ್ರ ರಾಜಕಾರಣದಲ್ಲಿ ಉಲ್ಲೇಖಾರ್ಹ ಸಾಧನೆ ಮಾಡಿರುವ, ಶ್ರೀಯುತ ಖರ್ಗೆಯವರ ಬಗ್ಗೆ ನನಗೆ ಅಪಾರ ಗೌರವ ಇದೆ. ನನ್ನ ಬಗ್ಗೆ ಅನ್ಯಥಾ ಭಾವಿಸಬಾರದು ಎಂದು ವಿನಂತಿಸುತ್ತೇನೆ.@kharge @INCKarnataka
— Araga Jnanendra (@JnanendraAraga) August 2, 2023