Mon,May06,2024
ಕನ್ನಡ / English

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ: ಚಂದ್ರಯಾನ-3 ಯಶಸ್ವಿ ಆಗಲಿದೆ, ಶ್ರಾವಣ ಮಾಸದ ಮಧ್ಯಂತರದಲ್ಲಿ... | JANATA NEWS

20 Aug 2023
2134

ಬೆಳಗಾವಿ : ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಅವರು ಮತ್ತೊಂದು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.

ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ಆದರೆ, ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿ ಇದೆ ಎಂದು ಹೇಳಿದ್ದಾರೆ.

ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸಲಿವೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ.

ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು, ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು ಎಂದು ಹೇಳಿದರು.

ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್​​ ಲ್ಯಾಂಡಿಂಗ್​ ಮಾಡಲು ಇಸ್ರೋ ಸಜ್ಜಾಗಿದೆ. ಮೊದಲ ಹಂತ ಡಿ ಬೂಸ್ಟಿಂಗ್​​​​ ಕಾರ್ಯಾಚರಣೆಯೂ ಯಶಸ್ವಿಯಾಗಿತ್ತು. ಈಗ ಎರಡು ಹಂತದ ವೇಗ ತಗ್ಗಿಸುವ ಪ್ರಕ್ರಿಯೆಯೂ ಸಕ್ಸಸ್​ ​ಫುಲ್​​ ಆಗಿದೆ. ಭಾರತೀಯರ ಕನಸಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದ್ದು, ಇದರ ಮಧ್ಯೆ ಭವಿಷ್ಯ ನುಡಿದಿರುವ ಕೋಡಿಶ್ರೀ, ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.

ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗುತ್ತಿದೆ, ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ, ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ತಿನ್ನುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ‌ ಹೆಚ್ಚಿತ್ತು, ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗುತ್ತಿವೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

RELATED TOPICS:
English summary :Kodishree Makes Explosive Prediction: Chandrayaan-3 Will Be Successful, Between Shravan Month...

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...