Tue,Aug04,2026
ಕನ್ನಡ / English

ಕುಟುಂಬದ ಸಜೀವ ದಹನ: ಚಿತೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಶಂಕೆ! | JANATA NEWS

08 Oct 2023

ಶಿವಮೊಗ್ಗ : ಜಿಲ್ಲೆಯ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ತಗುಲಿ ಸಾವನ್ನಪ್ಪಿದ್ದಾರೆ.

ಕುಟುಂಬದ ಹಿರಿಯರಾದ ಅರ್ಚಕ ಕೆಲಸ ಮಾಡುತ್ತಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ , ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ ಭೇಟಿ ಮಾಡಿದ್ದಾರೆ. ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಮಾಡಿದ್ದು, ಎಸಿ ಸತ್ಯನಾರಾಯಣ, ತಾಸಿಲ್ದಾರ್ ಮೆಸ್ಕಾಂ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಆರಗ ಜ್ಞಾನೇಂದ್ರ ಮಾತನಾಡಿ, ಘಟನೆಯಿಂದ ತೀವ್ರ ನೋವಾಗಿದೆ. ಮೃತ ರಾಘವೇಂದ್ರ ಕೆಕೋಡ್ ಕುಟುಂಬಕ್ಕೆ 10 ಎಕರೆ ಅಡಿಕೆ ತೋಟವಿದೆ. 20 ರಿಂದ 25 ವರ್ಷದಿಂದ ಈ ಕುಟುಂಬ ನನಗೆ ಪರಿಚಯ ಇದೆ. ಆರ್ಥಿಕವಾಗಿ ಕುಟುಂಬಸ್ಥರು ಚೆನ್ನಾಗಿ ಇದ್ದಾರೆ ಬಡತನ ಏನು ಇಲ್ಲ. ರಾಘವೇಂದ್ರ ಅವರ ಅಣ್ಣ ತಮ್ಮಂದಿರು ಎಲ್ಲರೂ ಹೊರಗೆ ಇದ್ದಾರೆ.. ಎಲ್ಲರೂ ಚೆನ್ನಾಗಿ ಇದ್ದಾರೆ. ರಾಘವೇಂದ್ರ ಕುಟುಂಬ ಮಾತ್ರ ಗ್ರಾಮದಲ್ಲಿ ವಾಸವಾಗಿದೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಓರ್ವ ಮಗನ ಸ್ಥಿತಿ ಗಂಭೀರವಾಗಿದೆ. ಸದ್ಯ ಘಟನೆಗೆ ಕಾರಣ ಏನು ಎನ್ನುವುದು ಗೊತ್ತಾಗುತ್ತಿಲ್ಲ. ಪೊಲೀಸ್ ತನಿಖೆಯಿಂದಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದಿದ್ದಾರೆ. ಘಟನಾ ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಬಂದಿ ಪರಿಶೀಲನೆ ಮಾಡುತ್ತಿದೆ ಎಂದಿದ್ದಾರೆ ಎನ್ನಲಾಗಿದೆ.

ಸ್ಥಳ ಪರಿಶೀಲನೆ ನಡೆಸಿದ ಎಸ್​ಪಿ ಮಿಥುನ್ ಕುಮಾರ್, ಮನೆಯ ಕೋಣೆಯಲ್ಲಿ ಮೂವರ ಮೃತ ದೇಹ ಪತ್ತೆಯಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಘಟನೆ ನಡೆದ ಅರ್ಧಗಂಟೆಯೊಳಗೆ ತೀರ್ಥಹಳ್ಳಿಯಿಂದ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಭರತಗೆ ಶೇಕಡ 40 ರಿಂದ 50ರಷ್ಟು ಸುಟ್ಟ ಗಾಯಗಳಾಗಿದೆ. ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ದಾವಣಗೆರೆಯಿಂದ ಪೋರೆನ್ಸಿಕ್ ತಜ್ಞರ ತಂಡ, ಸೀನ್ ಆಫ್ ಕ್ರೈಮ್ ಆಫೀಸರ್ಸ್ ತಂಡ ಹಾಗೂ ಡಾಗ್ ಸ್ಕ್ವಾಡ್ ಆಗಮಿಸಿದೆ ಪರಿಶೀಲನೆ ಮಾಡುತ್ತಿದ್ದಾರೆ ಎಂದಿದ್ದಾರೆ.

RELATED TOPICS:
English summary :Burning the family alive: Suspect committed suicide by jumping on the pyre!

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...