ಶಿವಮೊಗ್ಗದಲ್ಲಿ ನಡೆದ ದುರಂತಕ್ಕೆ ಸಂತಾಪ ಸೂಚಿಸಿದ ನಟ ಸುದೀಪ್ | Filmz news
: ನಟ ಕಿಚ್ಚ ಸುದೀಪ್ ಶಿವಮೊಗ್ಗದಲ್ಲಿ ನಡೆದ ದುರ್ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದು, ಪ್ರತಿ ಪ್ರಾಣವು ಅಮೂಲ್ಯ ಎಂದು ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿ ಸಿಗಲಿ. ಪ್ರತಿ ಪ್ರಾಣವು ಅಮೂಲ್ಯ. ಸರ್ಕಾರ ಅಗತ್ಯ ಕ್ರಮ ತಗೆದುಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
ಸುದೀಪ್ ಅವರ ಹುಟ್ಟೂರು ಶಿವಮೊಗ್ಗ. ತಮ್ಮ ಬಾಲ್ಯವನ್ನು ಅವರು ಅಲ್ಲಿಯೇ ಕಳೆದಿದ್ದರು. ಇದೀಗ ತಮ್ಮ ಹುಟ್ಟೂರಿನಲ್ಲಿ ಸಂಭವಿಸಿದ ಈ ದುರ್ಘಟನೆ ಕುರಿತು ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ, ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿ, ಮೊದಲು ಮಾನವನಾಗು, ಎಂದು ಬರೆದುಕೊಂಡಿದ್ದಾರೆ. ಸುದೀಪ್ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಅನೇಕ ಅಭಿಮಾನಿಗಳು, ಈ ಘಟನೆ ಕುರಿತು ಸರ್ಕಾರ ಬೇಗ ಕ್ರಮ ತೆಗೆದುಕೊಳ್ಳಬೇಕು ಒತ್ತಾಯಿಸಿದ್ದಾರೆ.