ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣೇಗೌಡ ನಿಧನ! | Filmz news
: ಸ್ಯಾಂಡಲ್ವುಡ್ನ ಹಿರಿಯ ನಟ ಬಿ.ಎಂ.ಕೃಷ್ಣೇಗೌಡ ಅವರು ವಿಧಿವಶರಾಗಿದ್ದಾರೆ. 80 ವರ್ಷ ವಯಸ್ಸಿನ ಹಿರಿಯ ನಟ ಇಂದು ನಿಧನರಾಗಿದ್ದಾರೆ.
ಅವರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣಗೌಡರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೃಷ್ಣೇಗೌಡರ ಮಗ ಸತೀಶ್ ಒಂದು ತಿಂಗಳ ಹಿಂದೆಯೇ ಕರೊನಾಗೆ ಬಲಿಯಾಗಿದ್ದರು. ಆ ವೇಳೆ ತಂದೆ ಆಸ್ಪತ್ರೆಯಲ್ಲಿದ್ದ ಕಾರಣ ಮಗನ ಸಾವಿನ ಬಗ್ಗೆ ತಿಳಿಸಿರಲಿಲ್ಲ. ಇತ್ತೀಚಿಗೆ ಕರೊನಾದಿಂದ ಗುಣಮುಖರಾಗಿ ಮನೆಗೆ ಬಂದರೂ ಮಗನ ಸಾವಿನ ಸುದ್ದಿ ತಿಳಿದಿರಲಿಲ್ಲ. ಆದರೆ, ಮೂರು ದಿನದ ಹಿಂದೆ ಶ್ವಾಸಕೋಸ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಂದು ಬೆಳಗ್ಗೆ ಹೃದಯಾಘಾತದಿಂದ ಕೃಷ್ಣೇಗೌಡ ನಿಧರಾಗಿದ್ದಾರೆ.
ಕೃಷ್ಣೇಗೌಡ ಅವರು ಕನ್ನಡ ರಂಗಭೂಮಿಯ ದಿಗ್ಗಜ ನಿರ್ದೇಶಕರ ಅನೇಕ ನಾಟಕಗಳಲ್ಲಿ ನಟಿಸಿದ್ದರು, ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು.
ತಮ್ಮ ಅಭಿನಯಕ್ಕಾಗಿ ಕರ್ನಾಟಕ ರಾಜ್ಯ ಸರಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದಿದ್ದ ಕೃಷ್ಣೇಗೌಡ ಅವರ ನಿಧನದಿಂದ ಕನ್ನಡ ಕಲಾಲೋಕ ಮತ್ತೊಬ್ಬ ಹಿರಿಯ ಕಲಾವಿದ ನನ್ನ ಕಳೆದುಕೊಂಡಿದೆ.