ವಿಕ್ರಾಂತ್ ರೋಣದಲ್ಲಿ ಗಡಂಗ್‌ ರಕ್ಕಮ್ಮ ನಾಗಿ ಜಾಕ್ವೆಲಿನ್ ಫರ್ನಾಂಡಿಸ್! | Filmz news

2021-07-31
2350
Bollywood Actress Jacqueline Fernandez As Gadang Rakkamma In Kiccha Sudeep Starrer Vikranth Rona

: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ. ಅನೂಪ್ ಭಂಡಾರಿ ನಿರ್ದೇಶನ ಮಾಡಿರುವ ವಿಕ್ರಾಂತ್ ರೋಣ ಚಿತ್ರದ ವಿಶೇಷ ಪಾತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡ ಬಣ್ಣ ಹಚ್ಚಿದ್ದಾರೆ. ನಟನೆಯ ಈ ಚಿತ್ರದಲ್ಲಿ ಬಾಲಿವುಡ್​ ಬೆಡಗಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ ಎಂಬುದು ಕೆಲವೇ ದಿನಗಳ ಹಿಂದೆ ತಿಳಿದುಬಂದಿತ್ತು.

ಆದರೆ ಪಾತ್ರದ ಹೆಸರೇನು ಮತ್ತು ಅವರ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಈಗ ಜಾಕ್ವೆಲಿನ್​ ಪಾತ್ರದ ಫಸ್ಟ್​ಲುಕ್​ ಬಹಿರಂಗಪಡಿಸಲಾಗಿದೆ. ವಿಕ್ರಾಂತ್ ರೋಣ ಸಿನಿಮಾದ ಸೂಪರ್ ಸ್ಪೆಷಲ್ ಹಾಡಿನಲ್ಲಿ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಫರ್ನಾಂಡಿಸ್ ಅವರ ಲುಕ್ ಮತ್ತು ಪಾತ್ರದ ಹೆಸರು ಇದೀಗ ರಿವೀಲ್ ಆಗಿದೆ.

ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ವಿಶೇಷ ಹಾಡಿನಲ್ಲಿ ಅವರು ಸುದೀಪ್​ ಜೊತೆ ಸೇರಿ ಹೆಜ್ಜೆ ಹಾಕಿದ್ದಾರೆ. ಚಿತ್ರತಂಡವು ಜಾಕ್ವೆಲಿನ್‌ ಅವರ ಪಾತ್ರದ ಫಸ್ಟ್‌ಲುಕ್‌ ಬಿಡುಗಡೆ ಮಾಡಿದ್ದು, ರಕೇಲ್‌ ಡಿಕೋಸ್ಟ ಉರ್ಫ್‌ ಗಡಂಗ್‌ ರಕ್ಕಮ್ಮನಾಗಿ ತೆರೆ ಮೇಲೆ ಅವರು ಕಾಣಿಸಿಕೊಳ್ಳಿದ್ದಾರೆ.

ಇತ್ತೀಚೆಗಷ್ಟೇ ಚಿತ್ರೀಕರಣದ ಕೊನೆಯ ಹಂತದಲ್ಲಿ ಜಾಕ್ವೆಲಿನ್ ಹಾಗೂ ಸುದೀಪ್‌ ಅವರ ನೃತ್ಯದ ಭಾಗವನ್ನು ಚಿತ್ರತಂಡವು ಚಿತ್ರೀಕರಿಸಿಕೊಂಡಿತ್ತು. ಜಾನಿ ಮಾಸ್ಟರ್‌ ನೃತ್ಯ ನಿರ್ದೇಶನದಲ್ಲಿ 300 ಡ್ಯಾನ್ಸರ್‌ ನಡುವೆ, ಬೃಹತ್‌ ಸೆಟ್‌ನಲ್ಲಿ ಜಾಕ್ವೆಲಿನ್ ಹಾಗೂ ಸುದೀಪ್‌ ಹಾಡಿಗೆ ಹೆಜ್ಜೆ ಹಾಕಿದ್ದರು. ಇದಕ್ಕೆ ಸುಮಾರು ₹5 ಕೋಟಿ ವೆಚ್ಚವಾಗಿತ್ತು. ತುಳು ಭಾಷೆಯಲ್ಲಿ ಗಡಂಗ್‌ ಎಂದರೆ ಸಾರಾಯಿ ಅಂಗಡಿ. ಪೋಸ್ಟರ್‌ನಲ್ಲೂ ಗ್ಲ್ಯಾಮರಸ್‌ ಉಡುಪಿನಲ್ಲಿ ಜಾಕ್ವೆಲಿನ್‌ ಕಾಣಿಸಿಕೊಂಡಿದ್ದು ಮದ್ಯದ ಮಡಕೆಯಿಂದ ಮದ್ಯ ಸುರಿಯುತ್ತಿರುವಂತೆ ಪೋಸ್‌ ನೀಡಿದ್ದಾರೆ.

ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್ ಜೊತೆಗೆ ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ, ವಾಸುಕಿ ವೈಭವ್ ಸೇರಿದಂತೆ ದೊಡ್ಡ ತಾರಾಬಳಗವಿದೆ. ಚಿತ್ರವನ್ನು ರಂಗಿತರಂಗ ಖ್ಯಾತಿ ಅನೂಪ್​ ಭಂಡಾರಿ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಜಾಕ್​ ಮಂಜು ಬಂಡವಾಳವನ್ನು ಹೂಡಿದ್ದಾರೆ. ಲಾಕ್‌ಡೌನ್‌ ಇಲ್ಲದೇ ಇದ್ದಿದ್ದರೆ ಆಗಸ್ಟ್‌ 19ಕ್ಕೆ ವಿಕ್ರಾಂತ್‌ ರೋಣ ತೆರೆಯ ಮೇಲೆ ಬರಬೇಕಿತ್ತು. ಈಗಾಗಲೇ ಚಿತ್ರದ ಡಬ್ಬಿಂಗ್‌ ಕೆಲಸವೂ ಪೂರ್ಣಗೊಂಡಿದ್ದು, 2ಡಿ ಹಾಗೂ 3ಡಿಯಲ್ಲಿ ಚಿತ್ರವನ್ನು ತೆರೆಯ ಮೇಲೆ ತರಲು ಚಿತ್ರತಂಡ ಅಂತಿಮ ಸಿದ್ಧತೆ ನಡೆಸುತ್ತಿದೆ.

ವಿಕ್ರಾಂತ್​ ರೋಣ ಸಿನಿಮಾದಲ್ಲಿನ ಗಡಂಗ್​ ರಕ್ಕಮ್ಮ ಎಂಬ ನನ್ನ ಪಾತ್ರವನ್ನು ಪರಿಚಯಿಸಲು ಖುಷಿ ಆಗುತ್ತಿದೆ ಎಂದು ಜಾಕ್ವೆಲಿನ್​ ಫರ್ನಾಂಡಿಸ್​ ಟ್ವೀಟ್​ ಮಾಡಿದ್ದಾರೆ.

English summary :Bollywood Actress Jacqueline Fernandez As Gadang Rakkamma In Kiccha Sudeep Starrer Vikranth Rona

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!
ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!
ಹಲವು ಊಹಾಪೋಹಗಳ ನಂತರ ಮಂಡ್ಯದಿಂದ ಎಚ್‌ಡಿ.ಕುಮಾರಸ್ವಾಮಿ ಸ್ಪರ್ಧೆ ಅಂತಿಮಗೊಳಿಸಿದ ಜೆಡಿಎಸ್
ಹಲವು ಊಹಾಪೋಹಗಳ ನಂತರ ಮಂಡ್ಯದಿಂದ ಎಚ್‌ಡಿ.ಕುಮಾರಸ್ವಾಮಿ ಸ್ಪರ್ಧೆ ಅಂತಿಮಗೊಳಿಸಿದ ಜೆಡಿಎಸ್

ಫೋಟೋ ಗ್ಯಾಲಾರಿ MORE PHOTO...