ಸ್ವರ್ಗದ ಬಾಗಿಲನ್ನು ತೆಗೆದುಕೊಟ್ಟ ಯುವರಾಜನೇ ರಾಯನ್! | Filmz news

2021-09-03
2125
Meghana Raj

: ದಿವಂಗತ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾರಾಜ್ ಪ್ರೀತಿಯ ಪುತ್ರನ ನಾಮಕರಣ ಇಂದು ಅದ್ದೂರಿಯಾಗಿ ನಗರದ ಖಾಸಗಿ ಹೋಟೆಲ್‍ನಲ್ಲಿ ನೆರವೇರಿತು.

ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಿದ್ದಾರೆ. ನಾಮಕರಣ ಶಾಸ್ತ್ರ ಮುಗಿದ ಮೇಲೆ ಪ್ರತಿಕ್ರಿಯೆ ನೀಡಿದ ನಟಿ ಮೇಘನಾ ರಾಜ್, ಚಿರು ನಮ್ಮೆಲ್ಲರಿಗೂ ರಾಜ. ಅವನಿಗೆ ಹುಟ್ಟಿರುವ ಇವನು ಯುವರಾಜ. ಸ್ವರ್ಗದ ಬಾಗಿಲನ್ನು ತೆರೆದುಕೊಟ್ಟ ಯುವರಾಜ ನನ್ನ ಮಗ. ಹಾಗಾಗಿ, ಈ ಯುವರಾಜನಿಗೆ ರಾಯನ್ ರಾಜ್ ಸರ್ಜಾ ಹೆಸರಿಡಲು ಇಷ್ಟಪಟ್ಟೆ. ಅದಕ್ಕೆ ಎಲ್ಲರೂ ಒಪ್ಪಿಕೊಂಡರು, ಎಲ್ಲರೂ ಇಷ್ಟಪಟ್ಟರು ಎಂದು ತಿಳಿಸಿದ್ದಾರೆ.

ನಮ್ಮ ಜೀವನದಲ್ಲಿ ನಡೆದ ಎಲ್ಲ ಘಟನೆಯನ್ನು ನೀವು ಮನೆಯ ಸದಸ್ಯರಾಗಿ ನೋಡಿ ಕೊಂಡು ನಿಮ್ಮ ಭಾವನೆಗಳಂತೆ ಅದನ್ನು ಗೌರವಿಸಿದ್ದೀರಾ. ನಮ್ಮ ಜೀವನದಲ್ಲಿ ಕತ್ತಲೆ ತುಂಬಿದ್ದ ಸಮಯದಲ್ಲಿ ಬೆಳಕು ನೀಡಿದ್ದು ನಮ್ಮ ರಾಯನ್. ಅದಕ್ಕೆ ರಾಯನ್ ಎಂದು ಹೆಸರಿಟ್ಟಿದ್ದೇವೆ ಎಂದರು.

ನಮ್ಮ ಅಣ್ಣನ ಮಗನಿಗೆ ರಾಯನ್ ರಾಜ್ ಸರ್ಜಾ ಅಂತ ಹೆಸರಿಟ್ಟಿದ್ದೇವೆ. ರಾಜ್-ಸರ್ಜಾ ಅಂದಾಗಲೇ ಗೊತ್ತಾಗುತ್ತದೆ, ಎರಡು ಕುಟುಂಬಗಳೂ ಸದಾ ಒಂದಾಗಿರುತ್ತವೆ ಅಂತ. ಈ ಯೂಟ್ಯೂಬ್‌ನಲ್ಲಿ ಏನೇನೋ ನೆಗೆಟಿವ್ ವಿಚಾರಗಳನ್ನು ಹಾಕಿದ್ದಾರೆ. ಆ ರೀತಿ ನೆಗೆಟಿವ್ ಮಾಡೋದಕ್ಕೆ ಹೋಗಬೇಡಿ. ನಮ್ಮ ನಡುವೆ ಯಾವುದೇ ಹೊಂದಾಣಿಕೆ ಕೊರತೆ ಇಲ್ಲ. ಈ ಸಂದರ್ಭದಲ್ಲಿ ನಮ್ಮ ಅಂಕಲ್, ಅಣ್ಣನನ್ನು ನೆನಪು ಮಾಡಿಕೊಳ್ಳುತ್ತೇನೆ. ರಾಯನ್‌ಗೆ ನಾವೆಲ್ಲರೂ ಸಪೋರ್ಟ್‌ ಆಗಿದ್ದೇವೆ. ರಾಯನ್ ರಾಜ್ ಸರ್ಜಾ ಎಂದರೆ, ಸಂಸ್ಕೃತದಲ್ಲಿ ಯುವರಾಜ ಅಂತ ಅರ್ಥ ಎಂದು ಧ್ರುವ ಸರ್ಜಾ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸುಂದರ್ ರಾಜ್‍ರವರು, ಚಿರು ಮೊದಲಿನಿಂದಲೂ ಸ್ನೇಹ ಜೀವಿ. ಚಿರು ಅಗಲಿದ ನಂತರ ಸದಾ ನಮ್ಮ ಜೊತೆಯಾಗಿ ನಿಂತಿದ್ದು, ಚಿರು ಸ್ನೇಹಿತ ಪನ್ನಾಗಭರಣ ಹಾಗೂ ಅವರ ತಂಡ. ಎಷ್ಟೋ ಕಷ್ಟದ ಸಮಯದಲ್ಲಿ ಹೇಗೆ ಅದನ್ನು ನಿಭಾಯಿಸಬೇಕು ಎಂದು ಗೊತ್ತಿಲ್ಲದೇ ಇರುವ ಸಂದರ್ಭದಲ್ಲಿ ಅವರು ಬಂದು ನಮ್ಮ ಕುಟುಂಬಕ್ಕೆ ಬೆಂಬಲವಾಗಿ ನಿಂತರು. ಚಿರು ಒಬ್ಬ ಒಳ್ಳೆಯ ಸ್ನೇಹಿತರನ್ನು ನೀಡಿ ಹೋಗಿದ್ದಾರೆ ಎಂದು ಭಾವುಕರಾಗಿದ್ದಾರೆ.

English summary :Meghana Raj

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಫೋಟೋ ಗ್ಯಾಲಾರಿ MORE PHOTO...