ಅಪ್ಪು ಸಮಾಧಿಗೆ ಅಲ್ಲು ಅರ್ಜುನ್ ಭೇಟಿ, ಪುನೀತ್ ನಿವಾಸಕ್ಕೆ ತೆರಳಿ ಫೋಟೋಗೆ ನಮನ! | Filmz news
: ಅಪ್ಪು ಸಮಾಧಿಗೆ ಪುಷ್ಪ ನಮನ ಸಲ್ಲಿಸುತ್ತಲೇ ಅಲ್ಲು ಅರ್ಜುನ್ ಭಾವುಕರಾದರು. ಅಲ್ಲು ಅರ್ಜುನ್ ಮೊದಲಿಗೆ ನಾಗಾವರದಲ್ಲಿರುವ ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿದರು. ನಟ ಶಿವರಾಜ್ಕುಮಾರ್ ಅವರನ್ನ ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದರು.
ಬಳಿಕ ಶಿವರಾಜ್ ಕುಮಾರ್ ಜೊತೆ ಸೇರಿ ಸದಾಶಿವ ನಗರದಲ್ಲಿರುವ ಅಪ್ಪು ಮನೆಗೆ ಭೇಟಿ ನೀಡಿದ್ದಾರೆ. ಅಪ್ಪು ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಮನೆಯಲ್ಲಿದ್ದ ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭಾವುಕರಾದರು.
ಬಳಿಕ ಮಾತನಾಡಿದ ಅಲ್ಲು ಅರ್ಜುನ್, ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿ ಮಾಡುತ್ತಿದ್ದೆ. ಅವರು ಹೈದರಾಬಾದ್ಗೆ ಬಂದಾಗ ನನ್ನನ್ನು ಭೇಟಿ ಮಾಡುತ್ತಿದ್ದರು.. ನಮ್ಮ ಮನೆಗೆ ಬರುತ್ತಿದ್ದರು. ಅದೆಷ್ಟೋ ಬಾರಿ ನಾವು ಒಟ್ಟಿಗೆ ಕೂತು ಊಟ ಮಾಡಿದ್ದೇವೆ. ನಮ್ಮಿಬ್ಬರ ನಡುವೆ ಪರಸ್ಪರ ಪ್ರೀತಿ ವಿಶ್ವಾಸವಿತ್ತು. ಪುನೀತ್ ಇಲ್ಲ ಎಂಬ ವಿಷಯವನ್ನೇ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ ಎಂದರು.