ಕಾಂತಾರ ಸಿನಿಮಾ ನೋಡಿ ಪತ್ರವನ್ನ ಹಂಚಿಕೊಂಡ ಕಿಚ್ಚ ಸುದೀಪ್! | Filmz news

2022-10-08
3129
Kichcha Sudeep shared the letter after watching Kantara movie!

: ಕಾಂತಾರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ನಟ ಕಿಚ್ಚ ಸುದೀಪ್ ಕೂಡ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ನೋಡಿ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಎಂದು ಕ್ಯಾಪಿಟಲ್ ಲೆಟರ್​ನಲ್ಲಿ ಕ್ಯಾಪ್ಶನ್ ಕೊಟ್ಟ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಬರೆದಿರುವ ಪತ್ರದಲ್ಲಿ ಏನಿದೆ?

ಪತ್ರವನ್ನು ಬರೆಯುವಂತೆ ಮಾಡಿದ ತಂಡಕ್ಕೆ ನನ್ನ ಈ ಪತ್ರ..
ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಆದರೆ, ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ ಹೊರಡದಂತೆ ಆಗುವುದು ಬಹಳ ಅಪರೂಪ. ಆದರೆ ಅಪರೂಪಕ್ಕೆ ನಮ್ಮನ್ನು ಮಂತ್ರಮುಗ್ಧಗೊಳಿಸುವ ಸಿನಿಮಾ ನೋಡುತ್ತೇವೆ. ಅಂತಹ ಒಂದು ಸಿನಿಮಾ ಆಗಿರುವ ಕಾಂತಾರ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ. ಸಿಂಪಲ್ ಪ್ಲಾಟ್, ಅಸಾಧಾರಣ ರೀತಿಯಲ್ಲಿ ಬರೆದ, ಫೆಂಟಾಸ್ಟಿಕ್ ಆಗಿ ಮಾಡಲಾಗಿದೆ.

ಕಾಂತಾರ ಅಂಥದ್ದೊಂದು ಚಿತ್ರ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ರಿಷಬ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ಗೆದ್ದಿದ್ದಾರೆ.

ಯಾರಾದರೂ ಈ ರೀತಿಯಾಗಿ ಹೇಗೆ ಯೋಚಿಸಲು ಸಾಧ್ಯ ಎಂದು ಅಚ್ಚರಿ ಪಡುವುದಷ್ಟೇ ನಿಮ್ಮ ಕೆಲಸ. ಪರದೆ ಮೇಲೆ ತೋರಿಸಿದ ರೀತಿಯ ಅರ್ಧದಷ್ಟಾದರೂ ಈ ಪ್ಲಾಟ್ ಪೇಪರ್ ಮೇಲಿದ್ದರೂ ಅದು ಅಚ್ಚರಿ. ಕ್ಲೈಮ್ಯಾಕ್ಸ್ ಪೇಪರ್​​ನಲ್ಲಿ ಕೂಡಾ ಪೇಪರ್ ನಲ್ಲಿ ಅದೊಂದು ಸಾಮಾನ್ಯ ಎಂಡಿಂಗ್ ಆಗಿರುತ್ತಿತ್ತು. ಇದು ನಿರ್ದೇಶಕರ ದೃಷ್ಟಿ. ನಿರ್ದೇಶಕ ಕಲ್ಪಿಸಿಕೊಂಡಂತೆ ಸಿನಿಮಾ ಸಿದ್ಧವಾಗಿದೆ. ಇದು ನಿಜಕ್ಕೂ ಮೆಚ್ಚುಗೆಗೆ ಅರ್ಹವಾಗಿದೆ.

ಇಂಥದ್ದೊಂದು ಅಸಾಧಾರಣ ಚಿತ್ರವನ್ನು ಕಟ್ಟಿಕೊಟ್ಟಿದ್ದಕ್ಕೆ ರಿಷಬ್ ಶೆಟ್ಟಿಗೆ ನನ್ನ ಮೊದಲ ಮೆಚ್ಚುಗೆ. ಅವರ ಮೇಲೆ ನಂಬಿಕೆ ಇಟ್ಟು, ಇಂಥದ್ದೊಂದು ಚಿತ್ರವನ್ನು ರೂಪಿಸಿರುವುದಕ್ಕೆ ಕಾರಣರಾದ ಚಿತ್ರತಂಡದವರೆಲ್ಲರಿಗೂ ನನ್ನ ಅಭಿನಂದನೆ.

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿಜಕ್ಕೂ ಒಬ್ಬ ಅಪ್ರತಿಮ ಸಂಗೀತ ನಿರ್ದೇಶಕ ಎಂದು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಈ ಚಿತ್ರದ ಮೇಲೆ ನಂಬಿಕೆ ಇಟ್ಟು, ಇದನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್ ಸಂಸ್ಥೆಗೂ ನನ್ನ ಶುಭಾಶಯಗಳು.

ಕಾಂತಾರ ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗಳಿಗೆ ತಕ್ಕ ಹಾಗೆ ಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆಯಾ ಎಂಬ ಕುತೂಹಲದಿಂದ ಚಿತ್ರ ನೋಡಿದೆ. ಚಿತ್ರ ಚೆನ್ನಾಗಿ ಮೂಡಿಬಂದಿರುವುದಷ್ಟೇ ಅಲ್ಲ, ನಮ್ಮ ನಿರೀಕ್ಷೆಗಳನ್ನೂ ಮೀರಿ ಅದ್ಭುತವಾಗಿದೆ ಎಂದು, ಕಿಚ್ಚ ಸುದೀಪ್ ಬರೆದಿದ್ದಾರೆ.

English summary :Kichcha Sudeep shared the letter after watching Kantara movie!

ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು

ಫೋಟೋ ಗ್ಯಾಲಾರಿ MORE PHOTO...