ಕಾಂತಾರ ಸಿನಿಮಾ ನೋಡಿ ಪತ್ರವನ್ನ ಹಂಚಿಕೊಂಡ ಕಿಚ್ಚ ಸುದೀಪ್! | Filmz news

2022-10-08
4930
Kichcha Sudeep shared the letter after watching Kantara movie!

: ಕಾಂತಾರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ನಟ ಕಿಚ್ಚ ಸುದೀಪ್ ಕೂಡ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ನೋಡಿ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಎಂದು ಕ್ಯಾಪಿಟಲ್ ಲೆಟರ್​ನಲ್ಲಿ ಕ್ಯಾಪ್ಶನ್ ಕೊಟ್ಟ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಬರೆದಿರುವ ಪತ್ರದಲ್ಲಿ ಏನಿದೆ?

ಪತ್ರವನ್ನು ಬರೆಯುವಂತೆ ಮಾಡಿದ ತಂಡಕ್ಕೆ ನನ್ನ ಈ ಪತ್ರ..
ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಆದರೆ, ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ ಹೊರಡದಂತೆ ಆಗುವುದು ಬಹಳ ಅಪರೂಪ. ಆದರೆ ಅಪರೂಪಕ್ಕೆ ನಮ್ಮನ್ನು ಮಂತ್ರಮುಗ್ಧಗೊಳಿಸುವ ಸಿನಿಮಾ ನೋಡುತ್ತೇವೆ. ಅಂತಹ ಒಂದು ಸಿನಿಮಾ ಆಗಿರುವ ಕಾಂತಾರ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ. ಸಿಂಪಲ್ ಪ್ಲಾಟ್, ಅಸಾಧಾರಣ ರೀತಿಯಲ್ಲಿ ಬರೆದ, ಫೆಂಟಾಸ್ಟಿಕ್ ಆಗಿ ಮಾಡಲಾಗಿದೆ.

ಕಾಂತಾರ ಅಂಥದ್ದೊಂದು ಚಿತ್ರ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ರಿಷಬ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ಗೆದ್ದಿದ್ದಾರೆ.

ಯಾರಾದರೂ ಈ ರೀತಿಯಾಗಿ ಹೇಗೆ ಯೋಚಿಸಲು ಸಾಧ್ಯ ಎಂದು ಅಚ್ಚರಿ ಪಡುವುದಷ್ಟೇ ನಿಮ್ಮ ಕೆಲಸ. ಪರದೆ ಮೇಲೆ ತೋರಿಸಿದ ರೀತಿಯ ಅರ್ಧದಷ್ಟಾದರೂ ಈ ಪ್ಲಾಟ್ ಪೇಪರ್ ಮೇಲಿದ್ದರೂ ಅದು ಅಚ್ಚರಿ. ಕ್ಲೈಮ್ಯಾಕ್ಸ್ ಪೇಪರ್​​ನಲ್ಲಿ ಕೂಡಾ ಪೇಪರ್ ನಲ್ಲಿ ಅದೊಂದು ಸಾಮಾನ್ಯ ಎಂಡಿಂಗ್ ಆಗಿರುತ್ತಿತ್ತು. ಇದು ನಿರ್ದೇಶಕರ ದೃಷ್ಟಿ. ನಿರ್ದೇಶಕ ಕಲ್ಪಿಸಿಕೊಂಡಂತೆ ಸಿನಿಮಾ ಸಿದ್ಧವಾಗಿದೆ. ಇದು ನಿಜಕ್ಕೂ ಮೆಚ್ಚುಗೆಗೆ ಅರ್ಹವಾಗಿದೆ.

ಇಂಥದ್ದೊಂದು ಅಸಾಧಾರಣ ಚಿತ್ರವನ್ನು ಕಟ್ಟಿಕೊಟ್ಟಿದ್ದಕ್ಕೆ ರಿಷಬ್ ಶೆಟ್ಟಿಗೆ ನನ್ನ ಮೊದಲ ಮೆಚ್ಚುಗೆ. ಅವರ ಮೇಲೆ ನಂಬಿಕೆ ಇಟ್ಟು, ಇಂಥದ್ದೊಂದು ಚಿತ್ರವನ್ನು ರೂಪಿಸಿರುವುದಕ್ಕೆ ಕಾರಣರಾದ ಚಿತ್ರತಂಡದವರೆಲ್ಲರಿಗೂ ನನ್ನ ಅಭಿನಂದನೆ.

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿಜಕ್ಕೂ ಒಬ್ಬ ಅಪ್ರತಿಮ ಸಂಗೀತ ನಿರ್ದೇಶಕ ಎಂದು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಈ ಚಿತ್ರದ ಮೇಲೆ ನಂಬಿಕೆ ಇಟ್ಟು, ಇದನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್ ಸಂಸ್ಥೆಗೂ ನನ್ನ ಶುಭಾಶಯಗಳು.

ಕಾಂತಾರ ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗಳಿಗೆ ತಕ್ಕ ಹಾಗೆ ಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆಯಾ ಎಂಬ ಕುತೂಹಲದಿಂದ ಚಿತ್ರ ನೋಡಿದೆ. ಚಿತ್ರ ಚೆನ್ನಾಗಿ ಮೂಡಿಬಂದಿರುವುದಷ್ಟೇ ಅಲ್ಲ, ನಮ್ಮ ನಿರೀಕ್ಷೆಗಳನ್ನೂ ಮೀರಿ ಅದ್ಭುತವಾಗಿದೆ ಎಂದು, ಕಿಚ್ಚ ಸುದೀಪ್ ಬರೆದಿದ್ದಾರೆ.

English summary :Kichcha Sudeep shared the letter after watching Kantara movie!

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕರ ಬಂಧನ; ನಂತರ ಬಿಡುಗಡೆ
ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕರ ಬಂಧನ; ನಂತರ ಬಿಡುಗಡೆ
ಸಂಸತ್ತಿನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮಸೂದೆ ಮಂಡನೆ; ವಂದೇ ಮಾತರಂ ರಕ್ಷಣಾ ಮಸೂದೆ ಮಂಡಿಸಲಿದ್ದಾರೆ ಅಮಿತ್ ಶಾ
ಸಂಸತ್ತಿನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮಸೂದೆ ಮಂಡನೆ; ವಂದೇ ಮಾತರಂ ರಕ್ಷಣಾ ಮಸೂದೆ ಮಂಡಿಸಲಿದ್ದಾರೆ ಅಮಿತ್ ಶಾ
ದೆಹಲಿಯಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ: 100 ಪೊಲೀಸರಿಗೆ ಗಾಯ, 70 ಮಂದಿ ವಶಕ್ಕೆ
ದೆಹಲಿಯಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ: 100 ಪೊಲೀಸರಿಗೆ ಗಾಯ, 70 ಮಂದಿ ವಶಕ್ಕೆ
ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿರ : ಆದರೆ ತೀವ್ರ ನಿಗಾ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯ - ವೈದ್ಯರ ತಂಡ
ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿರ : ಆದರೆ ತೀವ್ರ ನಿಗಾ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯ - ವೈದ್ಯರ ತಂಡ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ; ಪ್ರಧಾನಿ ಮೋದಿ ಸಂತಾಪ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ; ಪ್ರಧಾನಿ ಮೋದಿ ಸಂತಾಪ

ಫೋಟೋ ಗ್ಯಾಲಾರಿ MORE PHOTO...