ಮಣ್ಣು ಕುಸಿದು ಕಾರ್ಮಿಕ ಸಾವು! | Janata news
ಬೆಂಗಳೂರು : ಕೆಂಗೇರಿಯ ವೃಷಭಾವತಿ ನದಿ ಸಮೀಪ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಕಾರ್ಮಿಕನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಚಂಚಲ್ ಬುರ್ಮಾನ್ ಎಂದು ಗುರುತಿಸಲಾಗಿದೆ.
ವಾಸ್ತು ಪ್ರಾಪರ್ಟೀಸ್ ಸಂಸ್ಥೆಯ ಕಾರ್ಮಿಕನಾದ ಚಂಚಲ್, ಕೆಂಗೇರಿಯ ವೃಷಭಾವತಿ ಕಾಲುವೆಗೆ ತಡೆಗೋಡೆ ನಿರ್ಮಿಸಲು ಗುಂಡಿ ಅಗೆಯುತ್ತಿದ್ದ ವೇಳೆ ಮೈ ಮೇಲೆ ಮಣ್ಣು ಕುಸಿದು ಮೃತಪಟ್ಟಿದ್ದಾರೆ.
ಈ ಕಾಮಗಾರಿ ಸಬ್ ಕಾಂಟ್ರಾಕ್ಟ್ ಅನ್ನು ಗಣೇಶ್ ಎಂಬಾತ ಗುತ್ತಿಗೆ ಪಡೆದಿದ್ದ. ಗಣೇಶ್ ಪಶ್ಚಿಮ ಬಂಗಾಳದಿಂದ ಕಾರ್ಮಿಕರನ್ನು ಕರೆತಂದು ಬೆಂಗಳೂರಿನಲ್ಲಿ ಕೆಲಸ ಮಾಡಿಸುತ್ತಿದ್ದ.
ವಾಸ್ತು ಪ್ರಾಪರ್ಟೀಸ್ ಸಂಸ್ಥೆಯಿಂದ ಕೆಲಸಕ್ಕೆ ಬಂದಿದ್ದ ಕಾರ್ಮಿಕ ಚಂಚಲ್ ಇಂದು ವೃಷಭಾವತಿ ಕಾಲುವೆ ಬಳಿ ಗುಂಡಿ ಅಗೆಯುತ್ತಿದ್ದ ವೇಳೆ ಮೈ ಮೇಲೆ ಮಣ್ಣು ಕುಸಿದಿದೆ. ಚಂಚಲ್ ಮೇಲೆ ಮಣ್ಣಿನ ರಾಶಿ ಕುಸಿದು, ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.