ಕುಡಿವ ನೀರಿನ ಟ್ಯಾಂಕ್ಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು! | ಜನತಾ ನ್ಯೂಸ್
ಮೈಸೂರು : ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ಗೆ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಘಟನೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ.
ಟ್ಯಾಂಕ್ನಿಂದ ನಲ್ಲಿಗಳಿಗೆ ನೀರು ಬಿಟ್ಟಾಗ ವಾಸನೆ ಬಂದಿದ್ದರಿಂದ ಜನರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿಷ ಬೆರೆಸಿರುವ ವಿಚಾರ ಬೆಳಕಿಗೆ ಬಂದಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ತಾಪಂ ಇಒ ಶ್ರೀನಿವಾಸ್ ಮತ್ತು ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರಿನ ಟ್ಯಾಂಕ್ಗೆ ಭತ್ತದ ಗದ್ದೆಗೆ ಸಿಂಪಡಿಸುವ ಕ್ರಿಮಿನಾಶಕ ಔಷಧ ಹಾಕಿರುವ ಶಂಕೆ ವ್ಯಕ್ತವಾಗಿದೆ.
ನೀರಿನ ಟ್ಯಾಂಕ್ಗೆ ಕ್ರಿಮಿನಾಶಕ ಬೆರೆಸಿದ್ದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ನೀರು ಕುಡಿದ ಸಾಕುಪ್ರಾಣಿಗಳು ಅಸ್ವಸ್ಥಗೊಂಡಿವೆ. ಈ ವಿಷಯ ತಿಳಿಯದೆ ಕೆಲವರು ಈ ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾರೆ.
English summary :Mysuru