ಲಾರಿ-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ: ಹೆದ್ದಾರಿ ಶುಚಿಗೊಳಿಸುತ್ತಿದ್ದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ | ಜನತಾ ನ್ಯೂಸ್
ಚಿತ್ರದುರ್ಗ : ಆಂಬುಲೆನ್ಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ಛಿದ್ರ, ಛಿದ್ರವಾಗಿದೆ. ಅಲ್ಲದೆ ಟ್ರ್ಯಾಕ್ಟರ್ನ ಇಂಜಿನ್ ಪೀಸ್, ಪೀಸ್ ಆಗಿದೆ. ಚಿತ್ರದುರ್ಗ ತಾಲ್ಲೂಕಿನ ಸೀಬಾರ ಗ್ರಾಮದ ನಾಗರಾಜ (36), ಆಯಿತೋಳ್ ಗ್ರಾಮದ ಬಿ.ಕರಿಯಪ್ಪ (37) ಹಾಗೂ ಎಂ.ಕರಿಯಪ್ಪ (38) ಮೃತರು. ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಹೆದ್ದಾರಿ ಶುಚಿಗೊಳಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ಮೃತರನ್ನು ರಾಷ್ಟ್ರೀಯ ಹೆದ್ದಾರಿ ವಿಭಜಕ ಸ್ವಚ್ಛ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇವರು ಮೃತರು ಚಿತ್ರದುರ್ಗ ತಾಲೂಕು ಹಾಯ್ಕಲ್ ಗೊಲ್ಲರಹಟ್ಟಿ ಗ್ರಾಮದವರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕ್ಲೀನಿಂಗ್ ಕಾರ್ಯಕ್ಕೆಂದು ಟ್ರ್ಯಾಕ್ಟರ್ನಲ್ಲಿ ಹೋಗುತ್ತಿದ್ದರು.
ಲಾಕ್ಡೌನ್ ಕಾರಣಕ್ಕೆ ವಾಹನ ದಟ್ಟಣೆ ಕಡಿಮೆ ಇರುವುದರಿಂದ ಟ್ರ್ಯಾಕ್ಟರ್ ನಿಲ್ಲಿಸಿಕೊಂಡು ಹೆದ್ದಾರಿ ಬದಿಯ ಮಣ್ಣು ತೆಗೆದು ಲಾರಿಗೆ ತುಂಬುತ್ತಿದ್ದರು. ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಲಾರಿಯೊಂದು ಮತ್ತೊಂದು ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಸರಣ ಅಪಘಾತ ನಡೆಸಿದೆ.