ಸಿದ್ದರಾಮಯ್ಯ ನನ್ನನ್ನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ: ಬಿಎಸ್ವೈ | ಜನತಾ ನ್ಯೂಸ್
ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನ್ನನ್ನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಫೆಬ್ರವರಿ 27, 2020ರಂದು ನಡೆದ ನನ್ನ ಜನ್ಮದಿನದ ಕಾರ್ಯಕ್ರಮ ಹೊರತುಪಡಿಸಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ. ಹಾಗೆ ಭೇಟಿ ಮಾಡುವ ಅಗತ್ಯವೂ ನನಗಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಪಕ್ಷದಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಈ ಗುರಿ ತಲುಪುವ ತನಕ ನಾನು ವಿಶ್ರಮಿಸು ವುದಿಲ್ಲ. ನಂಬಿದ ಸಿದ್ಧಾಂತಗಳೊಂದಿಗೆ ನಾನೆಂದಿಗೂ ರಾಜಿಯಾಗಿಲ್ಲ, ಆಗುವುದೂ ಇಲ್ಲ. ಹಾಗೆಯೇ ಸಿದ್ದರಾಮಯ್ಯನವರು ಕೂಡ ಭೇಟಿ ಯಾಗಿಲ್ಲವೆಂದು ಸ್ಪಷ್ಟಪಡಿಸಿರುವುದರಿಂದ ಮಾಧ್ಯಮ ಗಳಲ್ಲಿ ಪ್ರಸ್ತಾಪವಾಗಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಅರ್ಥರಹಿತವಾಗಿದೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.