ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ, ಅವರದೇ ಪಕ್ಷದ ಮುಖಂಡರು ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ! | ಜನತಾ ನ್ಯೂಸ್
ಬೆಂಗಳೂರು : ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ಆಡಿರುವ ಮಾತುಗಳು ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಲೆಕ್ಷನ್ ಗಿರಾಕಿ ಎಂದು ಸಲೀಂ ಹೇಳಿದ್ದಾರೆ. ಇದರ ಜೊತೆಗೆ ಡಿಕೆ ಶಿವಕುಮಾರ್, ಕುಡಿಯುವ ವಿಚಾರ ಸೇರಿದಂತೆ ಅನೇಕ ವಿಚಾರಗಳು ಹೊರ ಬಂದಿದೆ.
ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.
ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕ ಸಿ.ಟಿ.ರವಿ ಸಲಹೆ ನೀಡಿದ್ದಾರೆ.
ಅವರು ನಡೆಸುತ್ತಿರುವ ಕಲೆಕ್ಷನ್ ಗುಟ್ಟನ್ನು ಕೊನೆಗೂ ಅವರದೇ ಪಕ್ಷದ ಮುಖಂಡರಾದ ವಿ.ಎಸ್.ಉಗ್ರಪ್ಪ ಮತ್ತು ಸಲೀಂ ಗುಸುಗುಸಿನಲ್ಲೇ ಜಗಜ್ಜಾಹಿರು ಮಾಡಿದ್ದಾರೆ. ಕಾಣದ ಕಲೆಕ್ಷನ್ ಇನ್ನು ಎಷ್ಟಿರಬಹುದು? ಎಂದು ಸಿ.ಟಿ.ರವಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.
ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು @INCKarnataka ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ ಎಂದರೆ ಕೆಪಿಸಿಸಿಗೆ ಎಂಥ ದುರ್ಗತಿ ಬಂದಿರಬಹುದು?#CorruptDKS
— C T Ravi 🇮🇳 ಸಿ ಟಿ ರವಿ (@CTRavi_BJP) October 13, 2021