ಕಲುಷಿತ ನಲ್ಲಿ ನೀರು ಸೇವಿಸಿ ಇಬ್ಬರ ಸಾವು, 6 ಮಂದಿ ಅಸ್ವಸ್ಥ! | ಜನತಾ ನ್ಯೂಸ್
ವಿಜಯಪುರ : ತಾಲೂಕಿನ ಯರಗಲ್ಲ ಗ್ರಾಮದಲ್ಲಿ ಎರಡು ದಿನಗಳ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಕಲುಷಿತ ನೀರು ಸೇವನೆಯೇ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಯರಗಲ್ ಗ್ರಾಮದ ಗುರುರಾಜ್ ಬಸವರಾಜ ಮಳಗಿ (15) ಹಾಗೂ ನೀಲಮ್ಮ ನಾರಾಯಣಪ್ಪ ಬೆನಕಣ್ಣವರ (65) ಮೃತಪಟ್ಟಿದ್ದಾರೆ. ನಿನ್ನೆ ಹಾಗೂ ಇಂದು ಗುರುರಾಜ್ ಹಾಗೂ ನೀಲಮ್ಮ ಮೃತಪಟ್ಟಿದ್ದಾರೆ.
ಗ್ರಾಮದ ನಲ್ಲಿ ನೀರಿಗೆ ಚರಂಡಿ ನೀರು ಸೇರ್ಪಡೆಯಾಗಿದ್ದು, ಇದೇ ನೀರನ್ನು ಸೇವಿಸಿರುವ ನಿವಾಸಿಗಳು ತೀವ್ರ ಅನಾರೋಗ್ಯಕ್ಕೀಡಾಗಿ ಜೀವಣ್ಮರಣದ ಮಧ್ಯೆ ಹೋರಾಡುವಂತಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಅಲ್ಲದೆ, ವಾಂತಿ ಬೇದಿಯಿಂದ ಗ್ರಾಮದ ಎಂಟು ಜನರು ಬಳಲುತ್ತಿದ್ದಾರೆ. ಎಂಟು ಜನರಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಳಚೆ ನೀರು ಕುಡಿವ ನಲ್ಲಿಗೆ ನೀರಿಗೆ ಸಂಪರ್ಕ ಹೊಂದಿದರೂ ಎಚ್ಚೆತ್ತುಕೊಳ್ಳದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಎಂದು ಆಕ್ರೋಶ ವ್ಯಕ್ತವಾಗಿದೆ.