ಪ್ರವೀಣ್ ನೆಟ್ಟಾರು ಪತ್ನಿ ನೌಕರಿಯಿಂದ ವಜಾ! | JANATA NEWS
ಬೆಂಗಳೂರು : ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದ.ಕ.
ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದತೆಗೆದುಹಾಕಲಾಗಿದೆ. ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಎಲ್ಲಾ ನೌಕರಿಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿದೆ. ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರವು ಆದೇಶ ನೀಡಿದೆ.
ಮಾಜಿ ಸಿಎಂ ಬೊಮ್ಮಾಯಿ ಅವರು ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶ ವರೆಗೆ ಎಂದು ನಮೂದಿಸಲಾಗಿತ್ತು. ಆ ಆದೇಶದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಎಂದಿದ್ದರೂ ನೂತನ ಕುಮಾರಿ ಅವರ ಅಪೇಕ್ಷೆ ಮೇರೆಗೆ ಅವರನ್ನು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು.
ನೂತನ್ ಕುಮಾರಿ ಅವರು ಕೋರಿಕೆಯ ಮೇರೆಗೆ ಅಕ್ಟೋಬರ್ 13 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಪತ್ತು ನಿರ್ವಹಣಾ ಇಲಾಖೆಗೆ ಸೇರಿದ್ದರು.
ಈ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮಾತನಾಡಿ, ಸರಕಾರ ಬದಲಾದಾಗ ಹಿಂದಿನ ಎಲ್ಲ ತಾತ್ಕಾಲಿಕ ನೇಮಕಾತಿಗಳು ಸ್ವಾಭಾವಿಕವಾಗಿ ರದ್ದಾಗುತ್ತವೆ ಎಂದು ಹೇಳಿದ್ದಾರೆ.
ಕೆಲಸದಿಂದ ಬಿಡುಗಡೆ ಮಾಡುವ ವಿಚಾರವನ್ನು ನೂತನ್ ಕುಮಾರಿ ಅವರ ಗಮನಕ್ಕೆ ತರಲಾಗಿದೆ. ಆಕೆ ತನ್ನನ್ನು ಮುಂದುವರಿಸಲು ಡಿಸಿ ಕಚೇರಿಗೆ ಪತ್ರ ಸಲ್ಲಿಸಿದರೆ, ಅದನ್ನು ಸರ್ಕಾರಕ್ಕೆ ಪರಿಗಣನೆಗೆ ತರಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.