ಲಾರಿ-ಬೈಕ್ ಅಪಘಾತ: ದೇವಸ್ಥಾನಕ್ಕೆ ತೆರಳುತ್ತಿದ್ದ ದಂಪತಿ ದಾರುಣ ಸಾವು | Janata news
ಬಳ್ಳಾರಿ : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಹೊರವಲಯದ ಅನಂತಶಯನ ಗುಡಿ ಬಳಿ ಮಂಗಳವಾರ ನಡೆದಿದೆ.
ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಬಳಿಯ ಜರ್ಮಲಿ ಗ್ರಾಮದ ನಿವಾಸಿ ರಾಜ(34) ಹಾಗೂ ನಗರದ ಕಾರಿಗನೂರಿನ ರಂಜಿತಾ(24) ಎಂದು ಗುರುತಿಸಲಾಗಿದೆ.
ದಂಪತಿ ಟಿವಿಎಸ್ ಎಕ್ಸಲ್ನಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದು ತೀವ್ರ ರಕ್ತಸ್ರಾವವಾಗಿ ದಂಪತಿ ಪ್ರಾಣಬಿಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹೊಸಪೇಟೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
English summary :Lorry Bike Accident Two Death In Ballari